ಮಸೂದ್ ಅಜರ್ 
ದೇಶ

Operation Sindoor: ಜೈಶ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಕುಟುಂಬ ಸರ್ವನಾಶ!

ಭಾರತ ನಡೆಸಿದ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತ ಸಹಚರರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಸ್ಥ ಮಸೂದ್ ಅಜರ್ ಒಪ್ಪಿಕೊಂಡಿದ್ದಾನೆ.

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಜೈಶ್ ಭಯೋತ್ಪಾದಕ ಮಸೂದ್ ಅಜರ್ ಕುಟುಂಬದ ಹತ್ತು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರಲ್ಲಿ ಮಸೂದ್ ಅಜರ್ ಸಹೋದರಿ ಮತ್ತು ಬಾವ ಸೇರಿದ್ದಾರೆ.

ಬಹಾವಲ್ಪುರ್ ಗುರಿಯಾಗಿಸಿಕೊಂಡು ಭಾರತ ನಡೆಸಿದ ದಾಳಿಯಲ್ಲಿ ಹತ್ತು ಜನರು ಹತ್ಯೆಯಾಗಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಪತ್ರಿಕೆ ಡೇಲಿ ಉರ್ದು ವಿಸ್ತಾರವಾದ ವರದಿ ಪ್ರಕಟ ಮಾಡಿದೆ. ಸ್ಥಳೀಯ ಮೂಲಗಳ ಪ್ರಕಾರ, ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ವಿಧಿಸಲಾಗಿದೆ.

ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ (ಜೆಇಎಂ) ಪ್ರಧಾನ ಕಚೇರಿಯ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತ ಸಹಚರರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಸ್ಥ ಮಸೂದ್ ಅಜರ್ ಒಪ್ಪಿಕೊಂಡಿದ್ದಾನೆ. ಬುಧವಾರ ಅಜರ್ ಬಿಡುಗಡೆ ಮಾಡಿದ ಹೇಳಿಕೆಯ ಮೂಲಕ ಮತ್ತು ಬಿಬಿಸಿ ಉರ್ದು ಮತ್ತು ಪಿಟಿಐ ವರದಿ ಮಾಡಿದ ಮೂಲಕ ಈ ಒಪ್ಪಿಗೆ ಬಂದಿದೆ.

ಬಹವಾಲ್ಪುರ್ ದಾಳಿಯು ವಿಶೇಷವಾಗಿ ಮಹತ್ವದ್ದಾಗಿತ್ತು ಏಕೆಂದರೆ ಸುಭಾನ್ ಅಲ್ಲಾ ಕ್ಯಾಂಪಸ್ ಅಥವಾ ಉಸ್ಮಾನ್-ಒ-ಅಲಿ ಕ್ಯಾಂಪಸ್, ಜೆಇಎಂನ ಸೈದ್ಧಾಂತಿಕ ಮತ್ತು ಕಾರ್ಯಾಚರಣೆಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿತ್ತು. 18 ಎಕರೆಗಳಷ್ಟು ವಿಸ್ತೀರ್ಣದಲ್ಲಿ ಹರಡಿರುವ ಈ ಕ್ಯಾಂಪಸ್, ಮಸೀದಿ ಮತ್ತು ನೇಮಕಾತಿ, ಬೋಧನೆ ಮತ್ತು ನಿಧಿಸಂಗ್ರಹಕ್ಕಾಗಿ ಬಳಸುವ ಸೌಲಭ್ಯಗಳನ್ನು ಹೊಂದಿತ್ತು.

ಮಸೂದ್ ಅಜರ್ ಕುಟುಂಬವು ಜಿಹಾದ್‌ನಲ್ಲಿ ಭಾಗಿಯಾಗಿದೆ. ಅವನ ಸಹೋದರರಾದ ಅಬ್ದುಲ್ ರೌಫ್, ತಲ್ಹಾ ಅಲ್-ಸೈಫ್ ಮತ್ತು ಇತರ ನಿಕಟ ಸಂಬಂಧಿಗಳು ಸಹ ವಿವಿಧ ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾಗಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಘಟನೆಗೆ ಪ್ರತಿಕ್ರಿಯೆಯಾಗಿ ಬುಧವಾರ ಭಾರತೀಯ ಸಶಸ್ತ್ರ ಪಡೆಗಳು "ಆಪರೇಷನ್ ಸಿಂದೂರ್" ಅನ್ನು ಪ್ರಾರಂಭಿಸಿದವು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಎರಡರಲ್ಲೂ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಈ ಕಾರ್ಯಾಚರಣೆ ಗಮನಹರಿಸಿತು.

ಹಫೀಜ್ ಮಸೂದ್ ಅಜರ್ ನಿಷೇಧಿತ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಸ್ಥಾಪಕ ಮತ್ತು ಮುಖ್ಯಸ್ಥ. 1995 ರಲ್ಲಿ ಕಾಶ್ಮೀರದಲ್ಲಿ ಆರು ವಿದೇಶಿ ಪ್ರವಾಸಿಗರ ಅಪಹರಣದಲ್ಲಿ ಭಾಗಿಯಾಗಿದ್ದಾಗ ಅವನ ಹೆಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೆ ಬಂದಿತು. ಅಪಹರಣಕಾರರು ತಮ್ಮನ್ನು "ಅಲ್-ಫ್ರಾನ್" ಗುಂಪು ಎಂದು ಗುರುತಿಸಿಕೊಂಡು ಮಸೂದ್ ಅಜರ್ ಬಿಡುಗಡೆಗೆ ಒತ್ತಾಯಿಸಿದ್ದರು. ಆದರೆ ಭಾರತ ಸರ್ಕಾರ ಈ ಬೇಡಿಕೆಯನ್ನು ಸ್ವೀಕರಿಸಲಿಲ್ಲ. ನಂತರ, ಐದು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬ ಪ್ರವಾಸಿ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿತ್ತು.

ರಕ್ಷಣಾ ಸಚಿವಾಲಯವು ಭಯೋತ್ಪಾದಕರಿಗೆ ಸಂಬಂಧಿಸಿದ ಒಂಬತ್ತು ಸ್ಥಳಗಳನ್ನು ನಿಖರವಾಗಿ ಹೊಡೆದುರುಳಿಸಲಾಗಿದೆ ಎಂದು ದೃಢಪಡಿಸಿದೆ. ಮುಖ್ಯವಾಗಿ, ದಾಳಿಗಳು ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ, ಈ ಕಾರ್ಯಾಚರಣೆಯು ಭಯೋತ್ಪಾದಕ ನೆಲೆಗಳನ್ನು ನಿರ್ಮೂಲನೆ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

SCROLL FOR NEXT