ದೆಹಲಿಯಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಡೆಲ್ ಅಲ್-ಜುಬೈರ್ ಅವರೊಂದಿಗೆ ಹಸ್ತಲಾಘವ ಮಾಡುತ್ತಿದ್ದಾರೆ. 
ದೇಶ

ಪಾಕ್ ಜೊತೆ ಉದ್ವಿಗ್ನತೆ: ಭಾರತಕ್ಕೆ ಸೌದಿ ಅರೇಬಿಯಾ ಸಚಿವ ಅಡೆಲ್ ಅಲ್ಜುಬೈರ್ ಅನಿರೀಕ್ಷಿತ ಭೇಟಿ

"ಇಂದು ಬೆಳಗ್ಗೆ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರೊಂದಿಗೆ ನಡೆಸಿದ ಮಾತುಕತೆ ಉತ್ತಮವಾಗಿತ್ತು ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನವದೆಹಲಿ: ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಡೆಲ್ ಅಲ್ಜುಬೈರ್ ಅವರು ಗುರುವಾರ ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಬಗ್ಗೆ ಗಮನಹರಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ ವಿಶೇಷ ಒತ್ತು ನೀಡಿದ್ದಾರೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ್' ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಮತ್ತಷ್ಟು ಹದಗೆಟ್ಟಿರುವ ಸಂದರ್ಭದಲ್ಲಿ ಅಲ್ಜುಬೈರ್ ಅವರ ದೆಹಲಿ ಭೇಟಿಯಾಗಿದೆ.

"ಇಂದು ಬೆಳಗ್ಗೆ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರೊಂದಿಗೆ ನಡೆಸಿದ ಮಾತುಕತೆ ಉತ್ತಮವಾಗಿತ್ತು ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಯನ್ನು ದೃಢವಾಗಿ ಎದುರಿಸುವ ಬಗ್ಗೆ ಭಾರತದ ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ನಿನ್ನೆ ದೆಹಲಿಗೆ ಬಂದಿದ್ದರು. ಅರಘ್ಚಿ ಶೀಘ್ರದಲ್ಲೇ ಜೈಶಂಕರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ. ಅವರು ಮಧ್ಯಾಹ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಜಟಾಪಟಿ: 5 ವರ್ಷವೂ ನಾನೇ ಸಿಎಂ ಎಂದು ಡಿಕೆಶಿ ನೋಡಿದಾಕ್ಷಣ ಸ್ವರ ಬದಲಿಸಿದ ಸಿದ್ದು, ಊಹಾಪೋಹ ಶುರು

ಕೂಡ್ಲಿಗಿ ಕಾರ್ಯಕ್ರಮದಲ್ಲಿ CM-DCM ನಡುವಿನ ವೈಮನಸ್ಸು ಬಹಿರಂಗ; ಅಕ್ಕ ಪಕ್ಕ ಕುಳಿತರೂ ಮಾತನಾಡದ ಸಿದ್ದು-ಡಿಕೆಶಿ..!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ 'ನಮಾಜ್‌': ಅನುಮತಿ ಕೊಟ್ಟವರು ಯಾರು? ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ! Video

ಸಂಬಂಧಪಟ್ಟ ಇಲಾಖೆಗೆ ಕುಂದುಕೊರತೆಗಳ ಬಗ್ಗೆ ದೂರು ನೀಡಲು ತಿಣುಕಾಡುತ್ತಿದ್ದೀರಾ: ರಾಜ್ಯದಲ್ಲಿ ಶೀಘ್ರವೇ ಆರಂಭವಾಗಲಿದೆ AI ಆಧಾರಿತ ವ್ಯವಸ್ಥೆ!

ಪ್ರಸ್ತುತ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿರೋದು ಒಳ್ಳೆಯದು: ಯತ್ನಾಳ್

SCROLL FOR NEXT