ಮೆಹಬೂಬಾ ಮುಫ್ತಿ PTI
ದೇಶ

ಭಾರತ, ಪಾಕ್ ಸಂಯಮ ಕಾಯ್ದುಕೊಳ್ಳಬೇಕು, ಮಾತುಕತೆ ಮುಂದುವರಿಸಬೇಕು: ಮೆಹಬೂಬಾ ಮುಫ್ತಿ ಮನವಿ

ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳ ನಾಯಕರು ಶಾಂತಿಯುತ ಸಹಬಾಳ್ವೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಒತ್ತಾಯಿಸಿದ್ದಾರೆ.

ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ಸಂಯಮದಿಂದ ವರ್ತಿಸಬೇಕು ಮತ್ತು ಯುದ್ಧವನ್ನು ಕೊನೆಗೊಳಿಸಲು ಮಾತುಕತೆ ನಡೆಸಬೇಕು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

"ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯು ಭಾರತ-ಪಾಕಿಸ್ತಾನ ಸಂಬಂಧಗಳನ್ನು "ಮತ್ತಷ್ಟು ಅಪಾಯಕಾರಿ ಹಂತಕ್ಕೆ ತಳ್ಳಿದೆ" ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಎರಡೂ ಕಡೆಯ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮುಗ್ಧ ಜೀವಗಳ ದುರಂತ ಅಂತ್ಯ ಹೃದಯವಿದ್ರಾವಕವಾಗಿದೆ. ಉಲ್ಬಣಗೊಳ್ಳುವ ಸಂಘರ್ಷವೂ ಪ್ರತಿ ಕ್ಷಣವೂ ಹೆಚ್ಚು ಜೀವಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಿಲಿಟರಿಯಿಂದ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ" ಎಂದು ಮುಫ್ತಿ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳ ನಾಯಕರು ಶಾಂತಿಯುತ ಸಹಬಾಳ್ವೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಒತ್ತಾಯಿಸಿದ್ದಾರೆ.

"ವಿಶೇಷವಾಗಿ ಭಾರತದ ಪ್ರಧಾನಿಯವರು ಯುದ್ಧವನ್ನು ಕೊನೆಗೊಳಿಸಲು ಮಾತುಕತೆ ಆರಿಸಿಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ. ಈಗ, ಎಂದಿಗಿಂತಲೂ ಹೆಚ್ಚಾಗಿ ಶಾಂತಿಯುತ ಸಹಬಾಳ್ವೆ ಮತ್ತು ಮಾತುಕತೆ ನಮ್ಮ ಏಕೈಕ ಸಾಧನವಾಗಿ ಕಾರ್ಯನಿರ್ವಹಿಸಬೇಕು" ಎಂದು ಮುಫ್ತಿ ಬರೆದಿದ್ದಾರೆ.

"ಪ್ರಾಮಾಣಿಕ ಮತ್ತು ನಿರಂತರ ಪ್ರಯತ್ನಗಳ ಮೂಲಕ ಮಾತ್ರ ನಾವು ಉದ್ವಿಗ್ನತೆಯನ್ನು ಕಡಿಮೆ ಮಾಡಬಹುದು ಮತ್ತು ಶಾಂತಿಯನ್ನು ಪುನಃಸ್ಥಾಪಿಸುವ ಕಠಿಣ ಪರಿಶ್ರಮವನ್ನು ಪ್ರಾರಂಭಿಸಬಹುದು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT