ರಾಜನಾಥ್ ಸಿಂಗ್ 
ದೇಶ

'ಊಹಿಸಲಾಗದ ನಿಖರತೆ'ಯೊಂದಿಗೆ ಆಪರೇಷನ್ ಸಿಂಧೂರ್: ಭಾರತೀಯ ಸೇನೆಗೆ ರಾಜನಾಥ್ ಸಿಂಗ್ ಅಭಿನಂದನೆ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ನಿರ್ವಹಿಸಿದ ನಿಖರತೆಯು "ಊಹಿಸಲಾಗದು" ಎಂದು ರಕ್ಷಣಾ ಸಚಿವರು ತಿಳಿಸಿದರು.

ನವದೆಹಲಿ: 'ಊಹಿಸಲಾಗದ ನಿಖರತೆ'ಯೊಂದಿಗೆ 'ಆಪರೇಷನ್ ಸಿಂಧೂರ್' ಅನ್ನು ಕಾರ್ಯಗತಗೊಳಿಸಿದ ಸಶಸ್ತ್ರ ಪಡೆಗಳ ಧೈರ್ಯ ಮತ್ತು ಶೌರ್ಯವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಶ್ಲಾಘಿಸಿದ್ದಾರೆ.

ಇಂದು ರಾಷ್ಟ್ರೀಯ ಗುಣಮಟ್ಟ ಸಮಾವೇಶದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, "ನಿನ್ನೆ ತೆಗೆದುಕೊಂಡ ಕ್ರಮ ಮತ್ತು ಅವರು ತೋರಿದ ಧೈರ್ಯ ಹಾಗೂ ಶೌರ್ಯಕ್ಕಾಗಿ ನಾನು ಸಶಸ್ತ್ರ ಪಡೆಗಳನ್ನು ಅಭಿನಂದಿಸುತ್ತೇನೆ. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ತಟಸ್ಥಗೊಳಿಸಲಾಗಿದೆ, ಇದು ನಮಗೆ ಹೆಮ್ಮೆಯ ವಿಷಯ" ಎಂದು ಹೇಳಿದರು.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ನಿರ್ವಹಿಸಿದ ನಿಖರತೆಯು "ಊಹಿಸಲಾಗದು" ಎಂದು ರಕ್ಷಣಾ ಸಚಿವರು ತಿಳಿಸಿದರು.

"ಆಪರೇಷನ್ ಸಿಂಧೂರ್ ನಿರ್ವಹಿಸಿದ ನಿಖರತೆಯು ಊಹಿಸಲಾಗದು, ಇದು ಅತ್ಯಂತ ಪ್ರಶಂಸನೀಯ. ಇದರಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಯಿತು ಮತ್ತು ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರು ಹತ್ಯೆ ಮಾಡಲಾಯಿತು. ಈ ವೇಳೆ ಯಾವುದೇ ಅಮಾಯಕರಿಗೆ ಹಾನಿಯಾಗದಂತೆ ಈ ಕಾರ್ಯಾಚರಣೆಯನ್ನು ನಡೆಸಲಾಯಿತು..." ಎಂದು ರಕ್ಷಣಾ ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ಬಿಹಾರ ಚುನಾವಣೆ: 3 ಲಕ್ಷ ಮತಗಳ ಏರಿಕೆ ಬಗ್ಗೆ ಕಾಂಗ್ರೆಸ್ ನಿಂದ ಮತ್ತೆ ಕಿರಿಕ್; ಚುನಾವಣಾ ಆಯೋಗ ಹೇಳಿದ್ದೇನು?

ನೌಗಮ್ ಠಾಣಾ ಸ್ಫೋಟ: ರಸಾಯನಶಾಸ್ತ್ರ ಮತ್ತು ನಿರ್ಲಕ್ಷ್ಯಗಳ ದುರಂತ ಸಂಗಮ

SCROLL FOR NEXT