ಉತ್ತರಕಾಶಿ ಜಿಲ್ಲೆಯ ಗಂಗಾನಿಯಲ್ಲಿ ಗಂಗೋತ್ರಿ ಧಾಮಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರದ ರಕ್ಷಣಾ ಮತ್ತು ಪರಿಹಾರ ಕಾರ್ಯಗಳು  
ದೇಶ

Uttarakhand: ಗಂಗೋತ್ರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ; ಆರು ಮಂದಿ ಸಾವು, ಒಬ್ಬರಿಗೆ ಗಾಯ; Video

ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ.

ಡೆಹ್ರಾಡೂನ್: ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯ ಗಂಗಾನಿ ಬಳಿ ಪತನಗೊಂಡು ಆರು ಪ್ರವಾಸಿಗರು ಮೃತಪಟ್ಟು, ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಸ್‌ಡಿಆರ್‌ಎಫ್ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ, ಏರೋಟ್ರಾನ್ಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ವಿಟಿ-ಒಎಕ್ಸ್‌ಎಫ್) ನಿರ್ವಹಿಸುವ, ಕ್ಯಾಪ್ಟನ್ ರಾಬಿನ್ ಸಿಂಗ್ ಪೈಲಟ್ ಮಾಡಿದ ಹೆಲಿಕಾಪ್ಟರ್ ಇಂದು ಬೆಳಗ್ಗೆ 8:50 ಕ್ಕೆ ಡೆಹ್ರಾಡೂನ್‌ನ ಸಹಸ್ತ್ರಧಾರ ಹೆಲಿಪ್ಯಾಡ್‌ನಿಂದ ಆರು ಪ್ರಯಾಣಿಕರೊಂದಿಗೆ ಟೇಕ್ ಆಫ್ ಆಗಿತ್ತು.

ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ.

ಮೃತರನ್ನು ಮುಂಬೈನ ಕಲಾ ಸೋನಿ (61), ವಿಜಯ ರೆಡ್ಡಿ (57) ಮತ್ತು ರುಚಿ ಅಗರ್ವಾಲ್ (56), ಉತ್ತರ ಪ್ರದೇಶದ ರಾಧಾ ಅಗರ್ವಾಲ್(79) ಆಂಧ್ರಪ್ರದೇಶದ ವೇದಾವತಿ ಕುಮಾರಿ (48) ಮತ್ತು ಪೈಲಟ್ ಗುಜರಾತ್‌ನವರು. ಗಾಯಗೊಂಡ ವ್ಯಕ್ತಿಯನ್ನು ಆಂಧ್ರ ಪ್ರದೇಶದ ಭಾಸ್ಕರ್ ಎಂದು ಗುರುತಿಸಲಾಗಿದೆ.

ಎಸ್‌ಡಿಆರ್‌ಎಫ್ ಕಮಾಂಡೆಂಟ್ ಅರ್ಪಣ್ ಯದುವಂಶಿ, ಉತ್ತರಕಾಶಿ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಟಿಎನ್‌ಐಇಗೆ ತಿಳಿಸಿದ್ದಾರೆ.

ಅಪಘಾತದ ಸ್ಥಳವನ್ನು ತಲುಪಿದ ಭಟ್ವಾಡಿಯ ಎಸ್‌ಡಿಆರ್‌ಎಫ್ ತಂಡವು ಹೆಲಿಕಾಪ್ಟರ್ ಸುಮಾರು 200 ರಿಂದ 250 ಮೀಟರ್ ಆಳದ ಆಳವಾದ ಕಂದಕಕ್ಕೆ ಬಿದ್ದಿರುವುದನ್ನು ಗಮನಿಸಿತು. ತಂಡವು ಸ್ಥಳದಲ್ಲಿ ನೆಲೆಯನ್ನು ಸ್ಥಾಪಿಸಿ, ಕಮರಿಗೆ ಇಳಿಯಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೃಢಪಡಿಸಿದ್ದಾರೆ. ಆಡಳಿತ ಮತ್ತು ಪರಿಹಾರ ತಂಡಗಳು ಸ್ಥಳದಲ್ಲಿವೆ.

ಹೆಲಿಕಾಪ್ಟರ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ತನಿಖೆಗೆ ಆದೇಶಿಸಿದರು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳನ್ನು ತಕ್ಷಣ ಅಪಘಾತದ ಸ್ಥಳಕ್ಕೆ ಕಳುಹಿಸಲಾಯಿತು.

ಈ ಪ್ರದೇಶದಲ್ಲಿ ಇತ್ತೀಚೆಗೆ ತುರ್ತು ಲ್ಯಾಂಡಿಂಗ್ ನಂತರ ಈ ಘಟನೆ ನಡೆದಿದೆ. ಮೇ 5 ರಂದು, ಬದರಿನಾಥದಿಂದ ಡೆಹ್ರಾಡೂನ್‌ಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಬದರಿನಾಥ ಧಾಮ್ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಗೋಪೇಶ್ವರ ಕ್ರೀಡಾ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

SCROLL FOR NEXT