ಭಾರತ-ಪಾಕ್ ಸೇನಾ ಸಂಘರ್ಷ 
ದೇಶ

India-Pakistan war: ಕದನ ವಿರಾಮ ಘೋಷಣೆ; ಸಿಂಧೂ ಜಲ ಒಪ್ಪಂದ ಕುರಿತು ಭಾರತದ ನಿಲುವು ಅಚಲ

ಏತನ್ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಅಂದರೆ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದೂ ಎಂಇಎ ಸ್ಪಷ್ಟಪಡಿಸಿದೆ.

ನವದೆಹಲಿ: ಒಂದು ವಾರದಿಂದ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕೊನೆಗೂ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ.

ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನಗಳು ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದ್ದು, ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ.

ಇದರನ್ವಯ ಎರಡು ಕಡೆಗೆ ಸೂಚನೆಗಳನ್ನು ನೀಡಲಾಗಿದೆ. ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಯಾವುದೇ ಷರತ್ತುಗಳಿಲ್ಲ

ಇದೇ ವೇಳೆ ಕದನ ವಿರಾಮಕ್ಕೆ ಯಾವುದೇ ಷರತ್ತುಗಳಿಲ್ಲ ಎಂದು ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದ್ದು, ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ ಈ ಕದನ ವಿರಾಮಕ್ಕೆ ಕರೆ ಬಂದಿದೆ ಎಂದು ಹೇಳಿದೆ.

ಏತನ್ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಅಂದರೆ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದೂ ಎಂಇಎ ಸ್ಪಷ್ಟಪಡಿಸಿದೆ.

ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟಗೆ ಮತ್ತೆ ಮಾತುಕತೆ ನಡೆಸಲಿದ್ದು, ಅಂದಿನ ಚರ್ಚೆ ಬಳಿಕ ಎಲ್ಲ ರೀತಿಯ ಗೊಂದಲಗಳಿಗೆ ತೆರೆ ಬೀಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ರಣಾಂಗಣದಲ್ಲಿ ಅಮೆರಿಕಕ್ಕೆ ಹಿನ್ನಡೆಯಾಗಿರಬಹುದು, ಆದರೆ ಇಸ್ರೇಲಿಗಲ್ಲ! (ತೆರೆದ ಕಿಟಕಿ)

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

SCROLL FOR NEXT