ಭಾರತ-ಪಾಕ್ ಸೇನಾ ಸಂಘರ್ಷ 
ದೇಶ

India-Pakistan war: ಕದನ ವಿರಾಮ ಘೋಷಣೆ; ಸಿಂಧೂ ಜಲ ಒಪ್ಪಂದ ಕುರಿತು ಭಾರತದ ನಿಲುವು ಅಚಲ

ಏತನ್ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಅಂದರೆ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದೂ ಎಂಇಎ ಸ್ಪಷ್ಟಪಡಿಸಿದೆ.

ನವದೆಹಲಿ: ಒಂದು ವಾರದಿಂದ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕೊನೆಗೂ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ.

ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನಗಳು ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದ್ದು, ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ.

ಇದರನ್ವಯ ಎರಡು ಕಡೆಗೆ ಸೂಚನೆಗಳನ್ನು ನೀಡಲಾಗಿದೆ. ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಯಾವುದೇ ಷರತ್ತುಗಳಿಲ್ಲ

ಇದೇ ವೇಳೆ ಕದನ ವಿರಾಮಕ್ಕೆ ಯಾವುದೇ ಷರತ್ತುಗಳಿಲ್ಲ ಎಂದು ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದ್ದು, ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ ಈ ಕದನ ವಿರಾಮಕ್ಕೆ ಕರೆ ಬಂದಿದೆ ಎಂದು ಹೇಳಿದೆ.

ಏತನ್ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಅಂದರೆ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದೂ ಎಂಇಎ ಸ್ಪಷ್ಟಪಡಿಸಿದೆ.

ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟಗೆ ಮತ್ತೆ ಮಾತುಕತೆ ನಡೆಸಲಿದ್ದು, ಅಂದಿನ ಚರ್ಚೆ ಬಳಿಕ ಎಲ್ಲ ರೀತಿಯ ಗೊಂದಲಗಳಿಗೆ ತೆರೆ ಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!