ಮುಂಗಾರು ಮಳೆ (ಸಂಗ್ರಹ ಚಿತ್ರ) 
ದೇಶ

Monsoon: 16 ವರ್ಷಗಳಲ್ಲಿ ಇದೇ ಮೊದಲು; 4 ದಿನ ಮುಂಚಿತವಾಗಿ ಮುಂಗಾರು ಪ್ರವೇಶ; ಹವಾಮಾನ ಇಲಾಖೆ

ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.

ನವದೆಹಲಿ: ಕೇಂದ್ರ ಹವಾಮಾನ ಇಲಾಖೆ ರೈತರಿಗೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ.

ಹೌದು.. ಈ ಕೇಂದ್ರ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು, ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.

ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್ ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಈ ಹಿಂದೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ನಲ್ಲಿ 2025 ರ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಸಂಚಿತ ಮಳೆಯನ್ನು ಮುನ್ಸೂಚನೆ ನೀಡಿತ್ತು, ಇದು ಭಾರತೀಯ ಉಪಖಂಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯೊಂದಿಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳ ಸಾಧ್ಯತೆಯನ್ನು ತಳ್ಳಿಹಾಕಿತು.

16 ವರ್ಷಗಳಲ್ಲಿ ಇದೇ ಮೊದಲು

ನಿರೀಕ್ಷೆಯಂತೆ ಮಾನ್ಸೂನ್ ಕೇರಳಕ್ಕೆ ಆಗಮಿಸಿದರೆ, ಐಎಂಡಿ ದತ್ತಾಂಶದ ಪ್ರಕಾರ, 2009 ರಲ್ಲಿ ಮೇ 23 ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗದಲ್ಲಿ ಮುಂಗಾರು ಮಾರುತಗಳು ಬೇಗನೆ ಪ್ರವೇಶ ಮಾಡುತ್ತಿವೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರ ವೇಳೆಗೆ ಕೇರಳದ ಮೇಲೆ ಪ್ರಾರಂಭವಾಗಲಿದೆ ಮತ್ತು ಬಳಿಕ ಜುಲೈ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17 ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15 ರ ವೇಳೆಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ಮುಂಗಾರು ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ. ಮಳೆಯ ಶೇ. 105 ರಷ್ಟು (ಶೇ. 5 ರಷ್ಟು ಮಾದರಿ ದೋಷದೊಂದಿಗೆ) ಸಂಚಿತ ಮಳೆಯಾಗಿದೆ" ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT