ಜೈರಾಮ್ ರಮೇಶ್ 
ದೇಶ

ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ: ಕಾಂಗ್ರೆಸ್

ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಮೊದಲಿಗಿಂತ ಈಗ ಹೆಚ್ಚಾಗಿದೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ತಕ್ಷಣದಿಂದ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ವ ಪಕ್ಷ ಸಭೆಗೆ ಮತ್ತು ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ. ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ವಿರೋಧ ಪಕ್ಷ ಒತ್ತಾಯಿಸಿದೆ.

ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ಕರೆದು ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಮೊದಲಿಗಿಂತ ಈಗ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕ ಮಧ್ಯವರ್ತಿಯಾಗಿ ಮಾತುಕತೆ ನಡೆಸಿದ ಬಳಿಕ ಕದನ ವಿರಾಮ ತಕ್ಷಣದಿಂದ ಜಾರಿಗೆ ಬರಲು ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಪಾಕಿಸ್ತಾನದ ಮಿಲಿಚರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಮತ್ತು ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT