ಶ್ರೀನಗರ ವಿಮಾನ ನಿಲ್ದಾಣ 
ದೇಶ

ಜಮ್ಮು-ಕಾಶ್ಮೀರ: ನಾಳೆಯಿಂದ ಶ್ರೀನಗರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಪುನರ್ ಆರಂಭ

ವಿಮಾನ ನಿಲ್ದಾಣ ಮುಚ್ಚಿದ್ದರಿಂದ ಹಜ್ ವಿಮಾನಗಳ ಹಾರಾಟವನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾಳೆಯಿಂದ ವಿಮಾನಗಳ ಹಾರಾಟ ಪುನರ್ ಆರಂಭವಾಗಲಿದೆ.

ಕದನ ವಿರಾಮ ಒಪ್ಪಂದದೊಂದಿಗೆ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನತೆ ಶಮನಗೊಂಡ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾಳೆಯಿಂದ ಆರಂಭವಾಗಲಿದ್ದು, ಸಾಮಾನ್ಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಮುಚ್ಚಿದ್ದರಿಂದ ಹಜ್ ವಿಮಾನಗಳ ಹಾರಾಟವನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು.

ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕಳೆದ ವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ದೇಶದ 32 ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟ ಪುನರ್ ಆರಂಭಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟಣೆ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಾಳೆಯಿಂದ ಸಾಮಾನ್ಯ ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ ಸಂಸ್ಥೆಗಳು ಆರಂಭಿಸಲಿವೆ. ಸ್ಪೈಸ್ ಜೆಟ್ ಹೆಚ್ಚುವರಿ ವಿಮಾನಗಳನ್ನು ಆರಂಭಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT