ದೇಶ

India-Pak Ceasefire: ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನೊಳಗೊಂಡ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಎನ್ಎಸ್ಎ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು.

ಪಾಕಿಸ್ತಾನ ಏನಾದರೂ ಮಾಡಿದರೆ ಭಾರತದ ಪ್ರತಿಕ್ರಿಯೆ ಹೆಚ್ಚು ವಿನಾಶಕಾರಿ ಮತ್ತು ಬಲವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ನಿನ್ನೆ ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ "ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ. ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು ಈ ಷರತ್ತಿಗೆ ಒಪ್ಪಿದರೆ ಮಾತ್ರ ಮಾತುಕತೆಗೆ ಸಿದ್ಧರಿದ್ದೇವೆ, ಅದರ ಹೊರತಾಗಿ ಮಾತನಾಡಲು ಬೇರೇನೂ ಇಲ್ಲ. ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಕಾಶ್ಮೀರದ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ" ಎಂದು ಕಡ್ಡಿ ಮುರಿದಂತೆ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!