ಭಾರತದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ 
ದೇಶ

ಭಾರತ- ಪಾಕ್ DGMO ಮಹತ್ವದ ಸಭೆ: ಗುಂಡಿನ ದಾಳಿ, ಆಕ್ರಮಣ ನಡೆಸದಂತೆ ಬದ್ಧತೆ; ಸೇನೆ ನಿಯೋಜನೆ ಕಡಿತಕ್ಕೆ ಒಪ್ಪಿಗೆ!

ಎರಡೂ ಕಡೆಯವರು ಒಂದೇ ಒಂದು ಗುಂಡು ಹಾರಿಸಬಾರದು ಅಥವಾ ಯಾವುದೇ ಆಕ್ರಮಣಕಾರಿ ಕ್ರಮ ಆರಂಭಿಸಬಾರದು ಎಂಬ ಬದ್ಧತೆ ಮುಂದುವರಿಕೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು.

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಸೇನಾ ಜನರಲ್ ಗಳ (DGMO) ಮಹತ್ವದ ಸಭೆ ಸೋಮವಾರ ನಡೆಯಿತು.

ಎರಡೂ ಕಡೆಯವರು ಒಂದೇ ಒಂದು ಗುಂಡು ಹಾರಿಸಬಾರದು ಅಥವಾ ಯಾವುದೇ ಆಕ್ರಮಣಕಾರಿ ಕ್ರಮ ಆರಂಭಿಸಬಾರದು ಎಂಬ ಬದ್ಧತೆ ಮುಂದುವರಿಕೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು.

ಗಡಿ ಮತ್ತಿತರ ಪ್ರದೇಶಗಳಲ್ಲಿ ಸೇನಾಪಡೆ ನಿಯೋಜನೆ ಕಡಿತ ಖಾತ್ರಿಗೆ ಎರಡು ಕಡೆಯವರು ಒಪ್ಪಿಕೊಂಡಿರುವುದಾಗಿ ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಹಾಟ್ ಲೈನ್ ಮೂಲಕ ಸಭೆ ನಡೆದಿದೆ. ಮೊದಲಿಗೆ ಮಧ್ಯಾಹ್ನ 12ಕ್ಕೆ ಸಭೆ ನಿಗದಿಯಾಗಿತ್ತು. ಆದರೆ, ತದನಂತರ ಸಂಜೆಗೆ ಮುಂದೂಡಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದು ಉಗ್ರರು ನಡೆಸಿದ ದಾಳಿಯಲ್ಲಿ 26 ಜನರನ್ನು ಬಲಿ ತೆಗೆದುಕೊಂಡಿದ್ದರು. ಅದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯೂ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಗಳಲ್ಲಿ ಮೇ 7 ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ್ದವು.

ಬಳಿಕ ಪಾಕ್ ಪಡೆಗಳು ಭಾರತದ ಗಡಿ ಪ್ರದೇಶಗಳಲ್ಲಿ ನಡೆಸಿದ ಶೆಲ್, ಡ್ರೋನ್ ಹಾಗೂ ಕ್ಷಿಪಣಿ ದಾಳಿಯನ್ನು ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯಿಂದ ಸಮರ್ಥವಾಗಿ ಸೇನೆ ಹಿಮ್ಮೆಟ್ಟಿಸಿದ್ದವು. ನಾಲ್ಕು ರಾತ್ರಿಗಳು ಗಡಿಯಾಚೆ ನಡೆದ ಸೇನಾ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ, ಮೇ 10 ರಂದು ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಒಪ್ಪಂದ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT