ಭಯೋತ್ಪಾದಕ ಅಂತ್ಯಕ್ರಿಯೆಯಲ್ಲಿ ಪಾಕ್ ಅಧಿಕಾರಿಗಳು ಭಾಗಿ 
ದೇಶ

'ಭಾರತೀಯ ದಾಳಿಯಲ್ಲಿ ಮೃತಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಉನ್ನತ ಅಧಿಕಾರಿಗಳು ಭಾಗಿ'

ಪಾಕಿಸ್ತಾನವು ತನ್ನ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಗಳಿಗೆ ಬೆಂಬಲ ನೀಡುತ್ತಿದೆ ಎಂಬುದು ಮತ್ತಷ್ಟು ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಮೇ 7 ರಂದು ನಡೆದ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವಾಯುದಾಳಿಯಲ್ಲಿ ಸಾವನ್ನಪ್ಪಿದ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಹಲವಾರು ಉನ್ನತ ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಭಾರತೀಯ ಗುಪ್ತಚರ ಸಂಸ್ಥೆಗಳು ದೃಢಪಡಿಸಿವೆ.

ಈ ಕಾರ್ಯಕ್ರಮಗಳಲ್ಲಿ ಹಿರಿಯ ನಾಯಕರ ಉಪಸ್ಥಿತಿಯು, ಪಾಕಿಸ್ತಾನವು ತನ್ನ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಗಳಿಗೆ ಬೆಂಬಲ ನೀಡುತ್ತಿದೆ ಎಂಬುದು ಮತ್ತಷ್ಟು ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಲಷ್ಕರ್-ಎ-ತೈಬಾ ಕಮಾಂಡರ್ ಮುದಾಸರ್ ಖಾದಿಯಾನ್ ಖಾಸ್, ಆತನನ್ನು ಅಬು ಜುಂದಾಲ್ ಎಂದೂ ಕರೆಯುತ್ತಾರೆ, ದಾಳಿಯಲ್ಲಿ ತಟಸ್ಥಗೊಂಡ ಐದು ಪ್ರಭಾವಿ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ. ಜುಂದಾಲ್ ಎಲ್‌ಇಟಿಯ ಪ್ರಬಲ ಸ್ಥಳವಾದ ನರೋವಲ್ ಜಿಲ್ಲೆಯ ಮುರಿಡ್ಕೆಯಲ್ಲಿರುವ ಮರ್ಕಜ್ ತೈಬಾದ ಉಸ್ತುವಾರಿ ವಹಿಸಿದ್ದಆತನ ಅಂತ್ಯಕ್ರಿಯೆಯನ್ನು ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಯಿತು ಮತ್ತು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಪರವಾಗಿ ಪುಷ್ಪಗುಚ್ಛಗಳನ್ನು ಇಡಲಾಯಿತು ಎಂದು ಮೂಲಗಳು ತಿಳಿಸಿವೆ.

ಜಾಗತಿಕ ಭಯೋತ್ಪಾದಕ ಮತ್ತು ಹಿರಿಯ ಎಲ್‌ಇಟಿ ನಾಯಕ ಹಫೀಜ್ ಅಬ್ದುಲ್ ರೌಫ್ ಸಮಾರಂಭದ ನೇತೃತ್ವವನ್ನು ವಹಿಸಿದ್ದರು. ಪಾಕಿಸ್ತಾನ ಸೇನೆ ಮತ್ತು ಪಂಜಾಬ್‌ನ ನಾಗರಿಕ ಆಡಳಿತದ ಪ್ರಮುಖ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಭಯೋತ್ಪಾದಕ ಸಂಘಟನೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದನ್ನು ಒತ್ತಿಹೇಳುತ್ತದೆ.

ಲಾಹೋರ್‌ನ IV ಕಾರ್ಪ್ಸ್‌ನ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಫಯಾಜ್ ಹುಸೇನ್ ಶಾ, ಲಾಹೋರ್‌ನ GOC 11 ಪದಾತಿ ದಳದ ಬ್ರಿಗೇಡಿಯರ್ ಮೊಹಮ್ಮದ್ ಫರ್ಕಾನ್ ಶಬ್ಬೀರ್, 15 ಹೈಮೆಕ್ ಬ್ರಿಗೇಡ್‌ನ ಕಮಾಂಡರ್ ಡಾ. ಉಸ್ಮಾನ್ ಅನ್ವರ್, ಪಂಜಾಬ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್, ಮಲಿಕ್ ಸೊಹೈಬ್ ಅಹ್ಮದ್ ಭೇರ್ತ್, ಪಂಜಾಬ್ ಪ್ರಾಂತೀಯ ಅಸೆಂಬ್ಲಿಯ ಸದಸ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜೆಇಎಂ ಮುಖ್ಯಸ್ಥ ಮಸೂದ್ ಅಜರ್‌ನ ಹಿರಿಯ ಸೋದರಳಿಯ ಹಫೀಜ್ ಮುಹಮ್ಮದ್ ಜಮೀಲ್ ಭಾರತೀಯ ವಾಯುದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಅಧಿಕಾರಿಗಳು ದೃಢಪಡಿಸಿದರು. ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವುದು ಮತ್ತು ಸಂಘಟನೆಗೆ ನಿಧಿಸಂಗ್ರಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಯ

ಐಸಿ -814 ಹೈಜಾಕ್ ಪ್ರಕರಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಬೇಕಾಗಿದ್ದ ಮಸೂದ್ ಅಜರ್‌ನ ಮತ್ತೊಬ್ಬ ಸೋದರ ಮಾವ "ಉಸ್ತಾದ್ ಜಿ" ಎಂದೂ ಕರೆಯಲ್ಪಡುವ ಮೊಹಮ್ಮದ್ ಯೂಸುಫ್ ಅಜರ್ ಮತ್ತು ಅಫ್ಘಾನಿಸ್ತಾನದಿಂದ ಶಸ್ತ್ರಾಸ್ತ್ರ ಕಳ್ಳಸಾಗಣೆ ಮತ್ತು ಈ ಪ್ರದೇಶದಲ್ಲಿ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ ಈತ ಕೂಡ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ.

ಮೃತರಲ್ಲಿ ಜೆಇಎಂನ ಎಲ್‌ಇಟಿ ಕಾರ್ಯಕರ್ತ ಮೊಹಮ್ಮದ್ ಹಸನ್ ಖಾನ್ ಕೂಡ ಸೇರಿದ್ದಾನೆ. ಫೈಸಲಾಬಾದ್‌ನಲ್ಲಿ ನಡೆದ ಖಾಲಿದ್ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಹಿರಿಯ ಸೇನಾ ಅಧಿಕಾರಿಗಳು ಮತ್ತು ಫೈಸಲಾಬಾದ್‌ನ ಉಪ ಆಯುಕ್ತರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT