ಬಂಕರ್ ಗಳ ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯುದ್ಧಕ್ಕೂ 9,500 ಬಂಕರ್ ಗಳ ನಿರ್ಮಾಣ!

ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ 9,500 ಬಂಕರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಜಮ್ಮು-ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಅಟಲ್ ಡುಲ್ಲೋ ಹೇಳಿದ್ದಾರೆ.

ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಪಾಕಿಸ್ತಾನವು ನಾಗರಿಕ ಪ್ರದೇಶಗಳಲ್ಲಿ ಶೆಲ್ ದಾಳಿ ನಡೆಸಿದ್ದು, ಜಾನುವಾರು ಮತ್ತು ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ. ಗಡಿರೇಖೆಯುದ್ದಕ್ಕೂ ಇನ್ನೂ ಹೆಚ್ಚಿನ ಬಂಕರ್‌ಗಳ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದರು.

ಜಮ್ಮು-ಕಾಶ್ಮೀರದ ಗಡಿರೇಖೆಯ ಉದ್ದಕ್ಕೂ 9,500 ಬಂಕರ್‌ಗಳಿವೆ.ಇನ್ನೂ ಹೆಚ್ಚಿನ ಬಂಕರ್ ಗಳ ಸ್ಥಾಪನೆಗೆ ಬೇಡಿಕೆಯಿದ್ದು, ಬಂಕರ್‌ಗಳ ಕೊರತೆಯಾಗುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇತ್ತೀಚಿನ ಗಡಿಯಾಚೆಗಿನ ಶೆಲ್ ದಾಳಿಯಿಂದಾಗಿ ಕೆಲವು ಮನೆಗಳಿಗೆ ಹಾನಿಯಾಗಿರುವ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಇರುವ ನೌಶೇರಾ ತಹಸಿಲ್‌ನಲ್ಲಿರುವ ಕಲ್ಸಿಯನ್ ಪಂಚಾಯತ್‌ಗೆ ಮುಖ್ಯ ಕಾರ್ಯದರ್ಶಿ ಭೇಟಿ ನೀಡಿದರು.

ನೆಲದ ಪರಿಸ್ಥಿತಿಯನ್ನು ನಿರ್ಣಯಿಸಲು ರಾಜೌರಿ ಮತ್ತು ನೌಶೇರಾ ಸೆಕ್ಟರ್‌ಗಳಿಗೆ ಬಂದಿದ್ದೇನೆ. ಗಡಿಯಾಚೆಯಿಂದ ನಡೆದ ಶೆಲ್ ದಾಳಿಯು ನಾಗರಿಕ ಪ್ರದೇಶಗಳಿಗೆ ಅಪ್ಪಳಿಸಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT