ಬಂಕರ್ ಗಳ ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯುದ್ಧಕ್ಕೂ 9,500 ಬಂಕರ್ ಗಳ ನಿರ್ಮಾಣ!

ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ 9,500 ಬಂಕರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಜಮ್ಮು-ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಅಟಲ್ ಡುಲ್ಲೋ ಹೇಳಿದ್ದಾರೆ.

ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಪಾಕಿಸ್ತಾನವು ನಾಗರಿಕ ಪ್ರದೇಶಗಳಲ್ಲಿ ಶೆಲ್ ದಾಳಿ ನಡೆಸಿದ್ದು, ಜಾನುವಾರು ಮತ್ತು ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ. ಗಡಿರೇಖೆಯುದ್ದಕ್ಕೂ ಇನ್ನೂ ಹೆಚ್ಚಿನ ಬಂಕರ್‌ಗಳ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದರು.

ಜಮ್ಮು-ಕಾಶ್ಮೀರದ ಗಡಿರೇಖೆಯ ಉದ್ದಕ್ಕೂ 9,500 ಬಂಕರ್‌ಗಳಿವೆ.ಇನ್ನೂ ಹೆಚ್ಚಿನ ಬಂಕರ್ ಗಳ ಸ್ಥಾಪನೆಗೆ ಬೇಡಿಕೆಯಿದ್ದು, ಬಂಕರ್‌ಗಳ ಕೊರತೆಯಾಗುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇತ್ತೀಚಿನ ಗಡಿಯಾಚೆಗಿನ ಶೆಲ್ ದಾಳಿಯಿಂದಾಗಿ ಕೆಲವು ಮನೆಗಳಿಗೆ ಹಾನಿಯಾಗಿರುವ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಇರುವ ನೌಶೇರಾ ತಹಸಿಲ್‌ನಲ್ಲಿರುವ ಕಲ್ಸಿಯನ್ ಪಂಚಾಯತ್‌ಗೆ ಮುಖ್ಯ ಕಾರ್ಯದರ್ಶಿ ಭೇಟಿ ನೀಡಿದರು.

ನೆಲದ ಪರಿಸ್ಥಿತಿಯನ್ನು ನಿರ್ಣಯಿಸಲು ರಾಜೌರಿ ಮತ್ತು ನೌಶೇರಾ ಸೆಕ್ಟರ್‌ಗಳಿಗೆ ಬಂದಿದ್ದೇನೆ. ಗಡಿಯಾಚೆಯಿಂದ ನಡೆದ ಶೆಲ್ ದಾಳಿಯು ನಾಗರಿಕ ಪ್ರದೇಶಗಳಿಗೆ ಅಪ್ಪಳಿಸಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್