ಏರ್ ಇಂಡಿಯಾ ವಿಮಾನ 
ದೇಶ

ಭದ್ರತೆ ಆತಂಕ: ಏಳು ನಗರಗಳಿಗೆ ಏರ್ ಇಂಡಿಯಾ, ಇಂಡಿಗೋ ವಿಮಾನ ಹಾರಾಟ ರದ್ದು

ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಯುಪ್ರದೇಶ ನಿರ್ಬಂಧಗಳು ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಉಲ್ಲೇಖಿಸಿ, ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳು ಇಂದು ಮಂಗಳವಾರ ಉತ್ತರ ಮತ್ತು ಪಶ್ಚಿಮ ಭಾರತದ ಅನೇಕ ನಗರಗಳಿಗೆ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿರುವ ವಿಮಾನಯಾನ ಸಂಸ್ಥೆ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಇಂದು ರದ್ದುಗೊಳಿಸಲಾಗಿದೆ. ಪರಿಸ್ಥಿತಿಯನ್ನು ಕೂಲಂಕಷವಾಗಿ ಗಮನಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಮೊನ್ನೆ ಶನಿವಾರ ರಾತ್ರಿ 11:59 ರವರೆಗೆ ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುವುದಾಗಿ ಇಂಡಿಗೋ ಘೋಷಿಸಿದೆ.

ನಿನ್ನೆ ಸೋಮವಾರ ಸಂಜೆ, ಅಮೃತಸರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಅಮೃತಸರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದ ನಂತರ ದೆಹಲಿಗೆ ಮರಳಿತು. ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಮಿಲಿಟರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ 32 ವಿಮಾನ ನಿಲ್ದಾಣಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸೋಮವಾರ ಕಾರ್ಯಾಚರಣೆಯನ್ನು ಪುನರಾರಂಭಿಸಿತ್ತು.

ಮೇ 9 ರಂದು ಪ್ರಾರಂಭವಾದ ನಾಗರಿಕ ವಿಮಾನ ಸೇವೆಗಳ ಸ್ಥಗಿತಗೊಳಿಸುವಿಕೆಯು ಶ್ರೀನಗರ ಮತ್ತು ಅಮೃತಸರ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ಪರಿಣಾಮ ಬೀರಿತು. ಗಡಿಯಲ್ಲಿ ಹೆಚ್ಚಿದ ಉದ್ವಿಗ್ನತೆಯ ನಂತರ ತಾತ್ಕಾಲಿಕ ಮುಚ್ಚುವಿಕೆಯನ್ನು ಆರಂಭಿಸಿ ಮೇ 15ರವರೆಗೆ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT