ಸಾಂದರ್ಭಿಕ ಚಿತ್ರ  
ದೇಶ

ಭಾರತದ ಪ್ರಮುಖ ಸ್ಥಳಗಳ ಮೇಲೆ ಪಾಕಿಸ್ತಾನ ಹ್ಯಾಕರ್ ಗಳಿಂದ 15 ಲಕ್ಷ ಸೈಬರ್ ದಾಳಿ!

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮಧ್ಯಪ್ರಾಚ್ಯ ಪ್ರದೇಶದಿಂದ ಈ ದಾಳಿಗಳು ನಡೆದಿರುವುದರಿಂದ 15 ಲಕ್ಷ ಸೈಬರ್ ದಾಳಿ ಪ್ರಯತ್ನಗಳಲ್ಲಿ ಕೇವಲ 150 ಮಾತ್ರ ಯಶಸ್ವಿಯಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ನಿರ್ಣಾಯಕ ಮೂಲಸೌಕರ್ಯ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿಕೊಂಡು 15 ಲಕ್ಷಕ್ಕೂ ಹೆಚ್ಚು ಸೈಬರ್ ದಾಳಿಗಳನ್ನು ನಡೆಸಿದ ಏಳು ಅಡ್ವಾನ್ಸ್ಡ್ ಪರ್ಸಿಸ್ಟೆಂಟ್ ಥ್ರೆಟ್ (ಎಪಿಟಿ) ಗುಂಪುಗಳನ್ನು ಭಾರತೀಯ ಸೈಬರ್ ಏಜೆನ್ಸಿಗಳು ಗುರುತಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಡ್ಯಾನ್ಸ್ ಆಫ್ ಹಿಲರಿ' ಮತ್ತು 'ಕಾಲ್ಸ್ ಫ್ರಮ್ ಮಿಲಿಟರಿ' ಎಂಬ ಸಂಕೇತನಾಮ ಹೊಂದಿರುವ ಮಾಲ್‌ವೇರ್‌ಗಳ ಮೂಲಕ ಕೆಲವು ಪಾಕಿಸ್ತಾನಿ ಗುಪ್ತಚರ ಕಾರ್ಯಾಚರಣೆಗಳು (PIO) ಭಾರತದಲ್ಲಿ ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಬಳಸುವ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಹೇಳಿದರು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮಧ್ಯಪ್ರಾಚ್ಯ ಪ್ರದೇಶದಿಂದ ಈ ದಾಳಿಗಳು ನಡೆದಿರುವುದರಿಂದ 15 ಲಕ್ಷ ಸೈಬರ್ ದಾಳಿ ಪ್ರಯತ್ನಗಳಲ್ಲಿ ಕೇವಲ 150 ಮಾತ್ರ ಯಶಸ್ವಿಯಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ-ಪಾಕಿಸ್ತಾನ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆಸದಂತೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ನಂತರ ಭಾರತದಲ್ಲಿ ಸರ್ಕಾರಿ ವೆಬ್‌ಸೈಟ್‌ಗಳ ಮೇಲಿನ ಸೈಬರ್ ದಾಳಿಗಳು ಕಡಿಮೆಯಾಗಿವೆ ಎಂದು ನಮ್ಮ ತನಿಖೆಯಲ್ಲಿ ಕಂಡುಬಂದಿದೆ, ಆದರೆ ಸಂಪೂರ್ಣವಾಗಿ ನಿಂತಿಲ್ಲ. ಪಾಕಿಸ್ತಾನ, ಬಾಂಗ್ಲಾದೇಶ, ಇಂಡೋನೇಷ್ಯಾ, ಮೊರಾಕೊ ಮತ್ತು ಮಧ್ಯಪ್ರಾಚ್ಯ ದೇಶಗಳಿಂದ ಈ ದಾಳಿಗಳು ಮುಂದುವರೆದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಾಳಿಕೋರರು 'ಡಿಸ್ಟ್ರಿಬ್ಯೂಟೆಡ್ ಡಿನೈಯಲ್-ಆಫ್-ಸರ್ವಿಸ್ (DDoS) ದಾಳಿಗಳು' ಮತ್ತು 'GPS ವಂಚನೆ' ಸೇರಿದಂತೆ ಮಾಲ್‌ವೇರ್ ಅಭಿಯಾನಗಳನ್ನು ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಭಾರತೀಯ ವೆಬ್‌ಸೈಟ್‌ಗಳ ವಿರೂಪಗೊಳಿಸುವಿಕೆಯ ಪ್ರಕರಣಗಳು ಸಹ ವರದಿಯಾಗಿವೆ. ಆದರೆ ಅಂತಹ ಅನೇಕ ದಾಳಿಗಳನ್ನು ತಡೆಯಲಾಯಿತು ಎಂದು ಅವರು ಹೇಳಿದರು.

ಮಾಲ್‌ವೇರ್ ಅಭಿಯಾನಗಳು

ಈ ದಾಳಿಗಳ ಸ್ವರೂಪವನ್ನು ವಿವರಿಸಿದ ಅಧಿಕಾರಿಗಳು, ದಾಳಿಕೋರರು 'ಡಿಸ್ಟ್ರಿಬ್ಯೂಟೆಡ್ ಡಿನೈಯಲ್-ಆಫ್-ಸರ್ವಿಸ್ ದಾಳಿಗಳು' ಮತ್ತು 'GPS ವಂಚನೆ' ಯಂತಹ ಮಾಲ್‌ವೇರ್ ಅಭಿಯಾನಗಳನ್ನು ಬಳಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT