ನ್ಯಾಯಮೂರ್ತಿ ಬಿ ಆರ್ ಗವಾಯಿ 
ದೇಶ

ಭಾರತದ 52ನೇ ಸಿಜೆಐ ಆಗಿ ನ್ಯಾ. ಬಿ ಆರ್ ಗವಾಯಿ ಪ್ರಮಾಣ ವಚನ ಸ್ವೀಕಾರ; Video

ಮೇ 24, 2019 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಮುಂದಿನ ನವೆಂಬರ್ 23 ರಂದು ಅಧಿಕಾರದಿಂದ ಕೆಳಗಿಳಿಯುತ್ತಾರೆ.

ನವದೆಹಲಿ: ನ್ಯಾ.ಕೆ ಜಿ ಬಾಲಕೃಷ್ಣನ್ ನಂತರ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮೊದಲ ಬೌದ್ಧ ಮತ್ತು ಎರಡನೇ ದಲಿತ, ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (64ವ) ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುಪ್ರೀಂ ಕೋರ್ಟ್‌ಗೆ ತಲುಪಿದ ನ್ಯಾ.ಬಿ ಆರ್ ಗವಾಯಿ ಅವರು ಮಹಾತ್ಮ ಗಾಂಧಿ ಮತ್ತು ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು. 65 ವರ್ಷವಾದ ನಂತರ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ನ್ಯಾ.ಗವಾಯಿ ಅಧಿಕಾರ ವಹಿಸಿಕೊಂಡರು.

ಮೇ 24, 2019 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಮುಂದಿನ ನವೆಂಬರ್ 23 ರಂದು ಅಧಿಕಾರದಿಂದ ಕೆಳಗಿಳಿಯುತ್ತಾರೆ. ಇಂದು ನ್ಯಾಯಮೂರ್ತಿ ಗವಾಯಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

2007 ರಲ್ಲಿ ಹುದ್ದೆಗೆ ಬಡ್ತಿ ಪಡೆದು 2010 ರಲ್ಲಿ ನಿವೃತ್ತರಾದ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನಂತರ ನ್ಯಾಯಮೂರ್ತಿ ಗವಾಯಿ ಅವರು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಎರಡನೇ ಸಿಜೆಐ ಆಗಲಿದ್ದಾರೆ, ನ್ಯಾಯಮೂರ್ತಿ ಗವಾಯಿ ಅವರು ಕಾನೂನು ಮತ್ತು ಸಮಾನತೆಯ ನಿಯಮವನ್ನು ಎತ್ತಿಹಿಡಿಯುವ ಮತ್ತು ನಾಗರಿಕರ ಮೂಲಭೂತ, ಮಾನವ ಮತ್ತು ಕಾನೂನು ಹಕ್ಕುಗಳನ್ನು ರಕ್ಷಿಸುವ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಸಂವಿಧಾನ ಪೀಠದ ನಿರ್ಧಾರಗಳು ಸೇರಿದಂತೆ ಸುಮಾರು 300 ತೀರ್ಪುಗಳನ್ನು ಬರೆದಿದ್ದಾರೆ.

ಏಪ್ರಿಲ್ 16 ರಂದು, ಹಾಲಿ ಸಿಜೆಐ, ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಗವಾಯಿ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ನಾಮನಿರ್ದೇಶನ ಮಾಡಿ ಕೇಂದ್ರಕ್ಕೆ ಪತ್ರ ಬರೆದರು.

ನವೆಂಬರ್ 24, 1960 ರಂದು ಅಮರಾವತಿಯಲ್ಲಿ ಜನಿಸಿದ ಅವರು 1985 ರಲ್ಲಿ ವಕೀಲರ ಬಾರ್‌ಗೆ ಸೇರ್ಪಡೆಗೊಂಡರು. 1987 ರಿಂದ 1990 ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರವಾಗಿ ಅಭ್ಯಾಸ ಮಾಡಿ, ಸಾಂವಿಧಾನಿಕ ಮತ್ತು ಆಡಳಿತಾತ್ಮಕ ಕಾನೂನಿನ ಮೇಲೆ ಗಮನಹರಿಸಿದರು. ಅವರು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಕೌನ್ಸೆಲ್ ಆಗಿಯೂ ಸೇವೆ ಸಲ್ಲಿಸಿದರು.

ನವೆಂಬರ್ 14, 2003 ರಂದು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ನವೆಂಬರ್ 12, 2005 ರಂದು ಖಾಯಂ ನ್ಯಾಯಾಧೀಶರಾದರು.

ನ್ಯಾಯಮೂರ್ತಿ ಗವಾಯಿ ಅವರು ಆಗಸ್ಟ್ 1992 ರಿಂದ ಜುಲೈ 1993 ರವರೆಗೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ಸೇವೆ ಸಲ್ಲಿಸಿದರು. ನಂತರ ಅವರನ್ನು ಜನವರಿ 17, 2000 ರಂದು ನಾಗ್ಪುರ ಪೀಠಕ್ಕೆ ಸರ್ಕಾರಿ ವಕೀಲ ಮತ್ತು ಸಾರ್ವಜನಿಕ ಅಭಿಯೋಜಕರಾಗಿ ನೇಮಿಸಲಾಯಿತು.

ಕಳೆದ ಆರು ವರ್ಷಗಳಲ್ಲಿ, ಅವರು ಸಾಂವಿಧಾನಿಕ ಮತ್ತು ಆಡಳಿತಾತ್ಮಕ ಕಾನೂನು, ನಾಗರಿಕ ಮತ್ತು ಕ್ರಿಮಿನಲ್ ಕಾನೂನು, ವಾಣಿಜ್ಯ ವಿವಾದಗಳು, ಮಧ್ಯಸ್ಥಿಕೆ, ವಿದ್ಯುತ್ ಕಾನೂನು, ಶಿಕ್ಷಣ ವಿಷಯಗಳು ಮತ್ತು ಪರಿಸರ ಕಾನೂನು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳನ್ನು ನಿರ್ವಹಿಸುವ ಸುಮಾರು 700 ಪೀಠಗಳ ಭಾಗವಾಗಿದ್ದಾರೆ.

ನ್ಯಾಯಮೂರ್ತಿ ಗವಾಯಿ ಅವರು ಉಲಾನ್‌ಬಾತರ್ (ಮಂಗೋಲಿಯಾ), ನ್ಯೂಯಾರ್ಕ್ (ಯುಎಸ್‌ಎ), ಕಾರ್ಡಿಫ್ (ಯುಕೆ) ಮತ್ತು ನೈರೋಬಿ (ಕೀನ್ಯಾ) ಗಳಲ್ಲಿ ವಿವಿಧ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಅವರು ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳಲ್ಲಿ ಸಾಂವಿಧಾನಿಕ ಮತ್ತು ಪರಿಸರ ಸಮಸ್ಯೆಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ: ಕರ್ನಾಟಕದ 3 ಸಾಧಕರಿಗೆ ಗೌರವ

CCL 2026: ಭೋಜ್‌ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ಗೆ 18 ರನ್‌ಗಳ ರೋಚಕ ಜಯ, ಸೆಮಿಸ್ ಹಾದಿ ಸುಗಮ!

'ಬೆಂಗಳೂರಿನ ಮೂಲಕ ಜಗತ್ತು ನೋಡುತ್ತಿದೆ.. ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡುವುದಿಲ್ಲ': ಡಿಸಿಎಂ ಡಿಕೆ ಶಿವಕುಮಾರ್

ಕೇವಲ ಮುಂಬೈ ಮಾತ್ರವಲ್ಲ, ಇಡೀ ದೇಶವೇ ಹಸಿರು ಬಣ್ಣಕ್ಕೆ ತಿರುಗುತ್ತದೆ: ಪಕ್ಷದ ಕಾರ್ಪೋರೇಟರ್ ಹೇಳಿಕೆ ಸಮರ್ಥಿಸಿಕೊಂಡ AIMIM

ದೀದಿ ಬುಡಕ್ಕೇ ಬಂದ SIR: ಬಂಗಾಳ ಸರ್ಕಾರದ ಸಚಿವೆಗೆ ಚುನಾವಣಾ ಆಯೋಗ ನೋಟಿಸ್!

SCROLL FOR NEXT