ಸ್ಪೀಕರ್ ಯು.ಟಿ. ಖಾದರ್ 
ದೇಶ

ರಾಜ್ಯದಿಂದ ಇದೇ ಮೊದಲು: ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ ಖಾದರ್ ನೇಮಕ!

ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು. ಟಿ.ಖಾದರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ.

ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು.ಟಿ.ಖಾದರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ.

ಈ ನೇಮಕ ಮಹತ್ವದು ಎಂದು ಪರಿಗಣಿಸಲಾಗಿದೆ. ಮಹಾರಾಷ್ಟ್ರದ ಸ್ಪೀಕರ್ ರಾಹುಲ್ ನಾರ್ವೇಕರ್ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ. ಖಾದರ್ , ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸಮಿತಿಯ ಸದಸ್ಯರಾಗಿದ್ದಾರೆ.

ರಾಜ್ಯ ವಿಧಾನಸಭೆಗಳಲ್ಲಿ ಶಿಸ್ತು ಸುಧಾರಿಸಲು ಮತ್ತು ಸಂಸದೀಯ ನಿಯಮಗಳನ್ನು ಎತ್ತಿಹಿಡಿಯಲು ಸುಧಾರಣೆಗಳನ್ನು ಸಮಿತಿ ಪರಿಶೀಲಿಸುತ್ತಿದೆ. ದೇಶದ ರಾಜ್ಯ ವಿಧಾನಸಭೆಗಳ ಕಾರ್ಯ ಕಲಾಪಗಳಲ್ಲಿ ಅನೇಕ ಸುಧಾರಣೆಯಾಗಬೇಕಾಗಿದೆ.

ಅಶಿಸ್ತಿನ ನಡವಳಿಕೆ ತಡೆಯುವ ಕ್ರಮಗಳು, ಅಸಂಸದೀಯ ಭಾಷೆ ಬಳಕೆ ಸೇರಿದಂತೆ ಅನೇಕ ಬದಲಾವಣೆಗಳನ್ನು ತರಬೇಕಾಗಿದೆ ಎಂದು ಯು.ಟಿ. ಖಾದರ್ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ.

ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನು ನೆನಪಿಸಿಕೊಂಡ ಖಾದರ್, "ನಾನು 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಬೇಕಾದದ್ದು ದುಃಖದ ದಿನವಾಗಿತ್ತು. ಆದರೆ ಸದನದ ಸೌಜನ್ಯಕ್ಕೆ ಧಕ್ಕೆ ಬಂದಾಗ ಸ್ಪೀಕರ್ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ ಖಾದರ್, ಜನಾದೇಶಕ್ಕೆ ವಿರುದ್ಧವಾಗಿ ಪಕ್ಷಾಂತರ ಸಮಸ್ಯೆಗೆ ಪರಿಹಾರ ಸಮಿತಿಯ ಪ್ರಮುಖ ಕಾಳಜಿಯಾಗಿದೆ ಎಂದರು.

ರಾಜ್ಯ ವಿಧಾನಸಭೆಗಳಲ್ಲಿ ಸ್ಪೀಕರ್ ಅವರ ಅಧಿಕಾರ, ಜವಾಬ್ದಾರಿಗಳು ಮತ್ತು ಕಾರ್ಯವಿಧಾನದ ನಿಯಮಗಳನ್ನು ರಾಷ್ಟ್ರೀಯ ಸಮಿತಿಗೆ ಪರಿಶೀಲಿಸಲಿದ್ದು, ನಾಲ್ಕು ಬಾರಿ ಶಾಸಕರಾಗಿರುವ ಖಾದರ್ ಅವರು ಈ ರಾಷ್ಟ್ರೀಯ ಸಮಿತಿಗೆ ನಾಮನಿರ್ದೇಶನಗೊಂಡ ಕರ್ನಾಟಕದ ಮೊದಲ ಸ್ಪೀಕರ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT