ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟ 
ದೇಶ

Tamil Nadu: ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟ, 20 ಮಂದಿಗೆ ಗಾಯ

ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಹತ್ತಿರದ ಮನೆಗಳಿಗೆ ರಾಸಾಯನಿಕ ನೀರು ನುಗ್ಗಿದೆ. ಬಳಿಕ ಇಲ್ಲಿನ ನಿವಾಸಿಗಳು ವಾಂತಿ ಮಾಡಿಕೊಂಡಿದ್ದು, ಮೂರ್ಛೆ ಹೋದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ರಾಸಾಯನಿಕ ಘಟಕದಲ್ಲಿನ ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 20 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ಕಡಲೂರಿನ ಸಿಪ್ಕಾಟ್ ನಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಕಾರ್ಖಾನೆಯಲ್ಲಿ ರಾಸಾಯನಿಕ ನೀರಿನ ಟ್ಯಾಂಕರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಸಾಯನಿಕ ನೀರಿನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಹತ್ತಿರದ ಮನೆಗಳಿಗೆ ರಾಸಾಯನಿಕ ನೀರು ನುಗ್ಗಿದೆ. ಬಳಿಕ ಇಲ್ಲಿನ ನಿವಾಸಿಗಳು ವಾಂತಿ ಮಾಡಿಕೊಂಡಿದ್ದು, ಮೂರ್ಛೆ ಹೋದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಡಲೂರು ಸಿಪ್ಕಾಟ್ ಕೈಗಾರಿಕಾ ಎಸ್ಟೇಟ್‌ನ ಕುಡಿಕಾಡು ಗ್ರಾಮದ ಬಳಿ ಖಾಸಗಿ ಬಣ್ಣ ಬಳಿಯುವ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. ರಾಸಾಯನಿಕ ಕಂಪನಿಯಲ್ಲಿ ರಾಸಾಯನಿಕಗಳನ್ನು ಇಳಿಸುವ ಕೆಲಸ ನಡೆಯುತ್ತಿತ್ತು.

ಈ ವೇಳೆ, ಸಿಪ್ಕಾಟ್ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಅತಿಯಾದ ಶಾಖದಿಂದಾಗಿ 6 ​​ಲಕ್ಷ ಲೀಟರ್ ರಾಸಾಯನಿಕ ನೀರನ್ನು ಹೊಂದಿದ್ದ ಟ್ಯಾಂಕರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿತು. ಇದರಿಂದಾಗಿ, ಹತ್ತಿರದ ಮನೆಗಳಿಗೆ ರಾಸಾಯನಿಕ ನೀರು ನುಗ್ಗಿತು. ರಾಸಾಯನಿಕ ತ್ಯಾಜ್ಯ ನೀರು ಪ್ರವೇಶಿಸಿದ ಕಾರಣ ಕೆಲವು ಮನೆಗಳ ಗೋಡೆಗಳು ಕುಸಿದಿವೆ.

ಮನೆಗಳಿಗೆ ರಾಸಾಯನಿಕ ನೀರು ಪ್ರವೇಶಿಸಿದ್ದರಿಂದ ಕಣ್ಣಿನ ಕಿರಿಕಿರಿ, ವಾಂತಿ ಮತ್ತು ಮೂರ್ಛೆ ಹೋದ ಕಾರಣ 20 ಕ್ಕೂ ಹೆಚ್ಚು ಜನರನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯರ ಪ್ರತಿಭಟನೆ

ಇನ್ನು ಈ ಪ್ರದೇಶದಲ್ಲಿ ಇಷ್ಟು ದೊಡ್ಡ ಘಟನೆ ಸಂಭವಿಸಿದ್ದರೂ ದುರಂತದ ಬಳಿಕ ಅಧಿಕಾರಿಗಳು ಬಂದಿಲ್ಲ ಎಂದು ಆ ಪ್ರದೇಶದ 50 ಕ್ಕೂ ಹೆಚ್ಚು ಜನರು ಕಡಲೂರು-ಚಿದಂಬರಂ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಈ ವಿಷಯ ತಿಳಿದ ಕೂಡಲೇ ಕಡಲೂರು ತಾಲೂಕು ಮ್ಯಾಜಿಸ್ಟ್ರೇಟ್ ಮಹೇಶ್ ಮತ್ತು ಪೊಲೀಸ್ ಇಲಾಖೆ ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಕಡಲೂರು ಮುಧುನಗರ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT