ವಶಪಡಿಸಿಕೊಂಡ ವಸ್ತುಗಳು 
ದೇಶ

ಸಂಗ್ರೂರ್ ಜೈಲಿನಲ್ಲಿ ಡ್ರಗ್ಸ್ ಜಾಲ ಭೇದಿಸಿದ ಪಂಜಾಬ್ ಪೊಲೀಸರು; ಡಿಎಸ್ಪಿ ಸೇರಿ 18 ಜನರ ಬಂಧನ

ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ.

ಚಂಡೀಗಢ: ಪಂಜಾಬ್ ಪೊಲೀಸರು ಸಂಗ್ರೂರ್ ಜೈಲಿನಿಂದ ಕಾರ್ಯನಿರ್ವಹಿಸುತ್ತಿದ್ದ ಸುಸಂಘಟಿತ ಡ್ರಗ್ಸ್ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದು, ಜೈಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ(ಭದ್ರತಾ) ಸೇರಿದಂತೆ 18 ಜನರನ್ನು ಬಂಧಿಸಿದ್ದಾರೆ.

ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಗೌರವ್ ಯಾದವ್ ಅವರು ದೃಢಪಡಿಸಿದ್ದಾರೆ.

"ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ, ಸಂಗ್ರೂರ್ ಜೈಲಿನೊಳಗೆ ನಡೆಸಿದ ದಾಳಿಯಲ್ಲಿ 12 ಮೊಬೈಲ್ ಫೋನ್‌ಗಳು, ನಾಲ್ಕು ಸ್ಮಾರ್ಟ್‌ವಾಚ್‌ಗಳು, 50 ಗ್ರಾಂ ಅಫೀಮು, 12 ಗ್ರಾಂ ಹೆರಾಯಿನ್ ಮತ್ತು ಇತರ ನಿಷಿದ್ಧ ವಸ್ತುಗಳು ಪತ್ತೆಯಾಗಿವೆ.

ಪ್ರಾಥಮಿಕ ತನಿಖೆಯಲ್ಲಿ ಪರ್ಶಾಂತ್ ಎಂದು ಗುರುತಿಸಲಾದ ಜೈಲಿನ ಉದ್ಯೋಗಿ ಸಹ ಭಾಗಿಯಾಗಿರುವುದು ಪತ್ತೆಯಾಗಿದ್ದು, ಡ್ರಗ್ಸ್ ಕಳ್ಳಸಾಗಣೆ ಚಟುವಟಿಕೆಗೆ ಅನುಕೂಲ ಮಾಡಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದು ಯಾದವ್ ಹೇಳಿದ್ದಾರೆ.

ಸಂಗ್ರೂರ್ ಜೈಲಿನಲ್ಲಿರುವ ಕೈದಿ ಗುರ್ವಿಂದರ್ ಸಿಂಗ್ ಅವರ ಸಹಚರ ಅಮೃತಸರ ಮೂಲದ ಮಾದಕವಸ್ತು ಕಳ್ಳಸಾಗಣೆದಾರ ಮನ್ಪ್ರೀತ್ ಸಿಂಗ್ ಅವರನ್ನು ಸಹ ಬಂಧಿಸಲಾಗಿದೆ. ಮನ್‌ಪ್ರೀತ್ ಬಳಿಯಿದ್ದ 4 ಕೆಜಿ ಹೆರಾಯಿನ್, 5.5 ಲಕ್ಷ ರೂ. ಹಣ ಮತ್ತು ಎರಡು ಜೀವಂತ ಕಾರ್ಟ್ರಿಡ್ಜ್‌ಗಳೊಂದಿಗೆ 9 ಎಂಎಂ ಗ್ಲಾಕ್ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತನಿಖೆ ಮುಂದುವರೆದಿದ್ದು, ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಡಿಜಿಪಿ ಗೌರವ್ ಯಾದವ್ ಅವರು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ, ಹುದ್ದೆ ಅಥವಾ ಸ್ಥಾನಮಾನವನ್ನು ಲೆಕ್ಕಿಸದೆ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!

ಸದನದಲ್ಲಿ 'CM ಕುರ್ಚಿ ಕಿತ್ತಾಟ' ಪ್ರತಿಧ್ವನಿ: ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM ಡಿ.ಕೆ.ಶಿವಕುಮಾರ್!

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video

ಸೋನಮ್ ವಾಂಗ್ಚುಕ್ ಲಡಾಖ್ ನ್ನು ನೇಪಾಳವನ್ನಾಗಿಸಲು ಬಯಸುತ್ತಿದ್ದಾರೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡ್ತಾರೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘದಿಂದ ದೂರು

SCROLL FOR NEXT