ವಶಪಡಿಸಿಕೊಂಡ ವಸ್ತುಗಳು 
ದೇಶ

ಸಂಗ್ರೂರ್ ಜೈಲಿನಲ್ಲಿ ಡ್ರಗ್ಸ್ ಜಾಲ ಭೇದಿಸಿದ ಪಂಜಾಬ್ ಪೊಲೀಸರು; ಡಿಎಸ್ಪಿ ಸೇರಿ 18 ಜನರ ಬಂಧನ

ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ.

ಚಂಡೀಗಢ: ಪಂಜಾಬ್ ಪೊಲೀಸರು ಸಂಗ್ರೂರ್ ಜೈಲಿನಿಂದ ಕಾರ್ಯನಿರ್ವಹಿಸುತ್ತಿದ್ದ ಸುಸಂಘಟಿತ ಡ್ರಗ್ಸ್ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದು, ಜೈಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ(ಭದ್ರತಾ) ಸೇರಿದಂತೆ 18 ಜನರನ್ನು ಬಂಧಿಸಿದ್ದಾರೆ.

ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಗೌರವ್ ಯಾದವ್ ಅವರು ದೃಢಪಡಿಸಿದ್ದಾರೆ.

"ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ, ಸಂಗ್ರೂರ್ ಜೈಲಿನೊಳಗೆ ನಡೆಸಿದ ದಾಳಿಯಲ್ಲಿ 12 ಮೊಬೈಲ್ ಫೋನ್‌ಗಳು, ನಾಲ್ಕು ಸ್ಮಾರ್ಟ್‌ವಾಚ್‌ಗಳು, 50 ಗ್ರಾಂ ಅಫೀಮು, 12 ಗ್ರಾಂ ಹೆರಾಯಿನ್ ಮತ್ತು ಇತರ ನಿಷಿದ್ಧ ವಸ್ತುಗಳು ಪತ್ತೆಯಾಗಿವೆ.

ಪ್ರಾಥಮಿಕ ತನಿಖೆಯಲ್ಲಿ ಪರ್ಶಾಂತ್ ಎಂದು ಗುರುತಿಸಲಾದ ಜೈಲಿನ ಉದ್ಯೋಗಿ ಸಹ ಭಾಗಿಯಾಗಿರುವುದು ಪತ್ತೆಯಾಗಿದ್ದು, ಡ್ರಗ್ಸ್ ಕಳ್ಳಸಾಗಣೆ ಚಟುವಟಿಕೆಗೆ ಅನುಕೂಲ ಮಾಡಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದು ಯಾದವ್ ಹೇಳಿದ್ದಾರೆ.

ಸಂಗ್ರೂರ್ ಜೈಲಿನಲ್ಲಿರುವ ಕೈದಿ ಗುರ್ವಿಂದರ್ ಸಿಂಗ್ ಅವರ ಸಹಚರ ಅಮೃತಸರ ಮೂಲದ ಮಾದಕವಸ್ತು ಕಳ್ಳಸಾಗಣೆದಾರ ಮನ್ಪ್ರೀತ್ ಸಿಂಗ್ ಅವರನ್ನು ಸಹ ಬಂಧಿಸಲಾಗಿದೆ. ಮನ್‌ಪ್ರೀತ್ ಬಳಿಯಿದ್ದ 4 ಕೆಜಿ ಹೆರಾಯಿನ್, 5.5 ಲಕ್ಷ ರೂ. ಹಣ ಮತ್ತು ಎರಡು ಜೀವಂತ ಕಾರ್ಟ್ರಿಡ್ಜ್‌ಗಳೊಂದಿಗೆ 9 ಎಂಎಂ ಗ್ಲಾಕ್ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತನಿಖೆ ಮುಂದುವರೆದಿದ್ದು, ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಡಿಜಿಪಿ ಗೌರವ್ ಯಾದವ್ ಅವರು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ, ಹುದ್ದೆ ಅಥವಾ ಸ್ಥಾನಮಾನವನ್ನು ಲೆಕ್ಕಿಸದೆ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT