ವಶಪಡಿಸಿಕೊಂಡ ವಸ್ತುಗಳು 
ದೇಶ

ಸಂಗ್ರೂರ್ ಜೈಲಿನಲ್ಲಿ ಡ್ರಗ್ಸ್ ಜಾಲ ಭೇದಿಸಿದ ಪಂಜಾಬ್ ಪೊಲೀಸರು; ಡಿಎಸ್ಪಿ ಸೇರಿ 18 ಜನರ ಬಂಧನ

ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ.

ಚಂಡೀಗಢ: ಪಂಜಾಬ್ ಪೊಲೀಸರು ಸಂಗ್ರೂರ್ ಜೈಲಿನಿಂದ ಕಾರ್ಯನಿರ್ವಹಿಸುತ್ತಿದ್ದ ಸುಸಂಘಟಿತ ಡ್ರಗ್ಸ್ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದು, ಜೈಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ(ಭದ್ರತಾ) ಸೇರಿದಂತೆ 18 ಜನರನ್ನು ಬಂಧಿಸಿದ್ದಾರೆ.

ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಗೌರವ್ ಯಾದವ್ ಅವರು ದೃಢಪಡಿಸಿದ್ದಾರೆ.

"ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ, ಸಂಗ್ರೂರ್ ಜೈಲಿನೊಳಗೆ ನಡೆಸಿದ ದಾಳಿಯಲ್ಲಿ 12 ಮೊಬೈಲ್ ಫೋನ್‌ಗಳು, ನಾಲ್ಕು ಸ್ಮಾರ್ಟ್‌ವಾಚ್‌ಗಳು, 50 ಗ್ರಾಂ ಅಫೀಮು, 12 ಗ್ರಾಂ ಹೆರಾಯಿನ್ ಮತ್ತು ಇತರ ನಿಷಿದ್ಧ ವಸ್ತುಗಳು ಪತ್ತೆಯಾಗಿವೆ.

ಪ್ರಾಥಮಿಕ ತನಿಖೆಯಲ್ಲಿ ಪರ್ಶಾಂತ್ ಎಂದು ಗುರುತಿಸಲಾದ ಜೈಲಿನ ಉದ್ಯೋಗಿ ಸಹ ಭಾಗಿಯಾಗಿರುವುದು ಪತ್ತೆಯಾಗಿದ್ದು, ಡ್ರಗ್ಸ್ ಕಳ್ಳಸಾಗಣೆ ಚಟುವಟಿಕೆಗೆ ಅನುಕೂಲ ಮಾಡಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದು ಯಾದವ್ ಹೇಳಿದ್ದಾರೆ.

ಸಂಗ್ರೂರ್ ಜೈಲಿನಲ್ಲಿರುವ ಕೈದಿ ಗುರ್ವಿಂದರ್ ಸಿಂಗ್ ಅವರ ಸಹಚರ ಅಮೃತಸರ ಮೂಲದ ಮಾದಕವಸ್ತು ಕಳ್ಳಸಾಗಣೆದಾರ ಮನ್ಪ್ರೀತ್ ಸಿಂಗ್ ಅವರನ್ನು ಸಹ ಬಂಧಿಸಲಾಗಿದೆ. ಮನ್‌ಪ್ರೀತ್ ಬಳಿಯಿದ್ದ 4 ಕೆಜಿ ಹೆರಾಯಿನ್, 5.5 ಲಕ್ಷ ರೂ. ಹಣ ಮತ್ತು ಎರಡು ಜೀವಂತ ಕಾರ್ಟ್ರಿಡ್ಜ್‌ಗಳೊಂದಿಗೆ 9 ಎಂಎಂ ಗ್ಲಾಕ್ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತನಿಖೆ ಮುಂದುವರೆದಿದ್ದು, ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಡಿಜಿಪಿ ಗೌರವ್ ಯಾದವ್ ಅವರು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ, ಹುದ್ದೆ ಅಥವಾ ಸ್ಥಾನಮಾನವನ್ನು ಲೆಕ್ಕಿಸದೆ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT