ಸರ್ವ ಪಕ್ಷ ಸಭೆ 
ದೇಶ

ಭಯೋತ್ಪಾದನೆ ವಿರುದ್ಧ ಜಾಗತಿಕ ಬೆಂಬಲಕ್ಕೆ ಕಸರತ್ತು: ಭಾರತದಿಂದ ವಿದೇಶಕ್ಕೆ ಸರ್ವ ಪಕ್ಷ ನಿಯೋಗ!

ಆಪರೇಷನ್ ಸಿಂಧೂರ್ ಹಿಂದೆ ಭಾರತದ ತಾರ್ಕಿಕತೆ ಪ್ರಸ್ತುತಪಡಿಸುವುದು ಮತ್ತು ಗಡಿಯಾಚೆಯಿಂದ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸುವುದು ಇದರ ಉದ್ದೇಶವಾಗಿದೆ.

ನವದೆಹಲಿ: ಭಯೋತ್ಪಾದನೆಯ ವಿರುದ್ಧ ಪ್ರಮುಖ ರಾಜತಾಂತ್ರಿಕ ಅಭಿಯಾನವನ್ನು ಎನ್ ಡಿ ಎ ಸರ್ಕಾರ ಪ್ರಾರಂಭಿಸುತ್ತಿದೆ. ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳ ಬಗ್ಗೆ ಭಾರತದ ನಿಲುವನ್ನು ಪ್ರಸ್ತುತಪಡಿಸಲು ವಿದೇಶಕ್ಕೆ ಬಹುಪಕ್ಷೀಯ ನಿಯೋಗಗಳನ್ನು ಕಳುಹಿಸುತ್ತಿದೆ.

ಈ ಉಪ ಕ್ರಮದಡಿ ಎನ್‌ಡಿಎ ಮತ್ತು ಪ್ರಮುಖ ವಿರೋಧ ಪಕ್ಷಗಳ ಸಂಸದರು ಯುಎಸ್, ಯುಕೆ ಮತ್ತು ಇಸ್ಲಾಮಿಕ್ ರಾಷ್ಟ್ರಗಳು ಸೇರಿದಂತೆ ಐದರಿಂದ ಆರು ದೇಶಗಳಿಗೆ ಭೇಟಿ ನೀಡಲಿದ್ದು, ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಅಂತಾರಾಷ್ಟ್ರೀಯ ಬೆಂಬಲವನ್ನು ಪಡೆಯಲಿದ್ದಾರೆ. ಆಪರೇಷನ್ ಸಿಂಧೂರ್ ಹಿಂದೆ ಭಾರತದ ತಾರ್ಕಿಕತೆ ಪ್ರಸ್ತುತಪಡಿಸುವುದು ಮತ್ತು ಗಡಿಯಾಚೆಯಿಂದ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸುವುದು ಇದರ ಉದ್ದೇಶವಾಗಿದೆ.

ಎನ್‌ಡಿಎ ಮಿತ್ರಪಕ್ಷಗಳು ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕರು ಸೇರಿದಂತೆ ಸಂಸದರ ಬಹುಪಕ್ಷೀಯ ನಿಯೋಗವನ್ನು ರಚಿಸಲಾಗುತ್ತಿದೆ. ಭಾರತದ ವಿರುದ್ಧದ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಪಾಕಿಸ್ತಾನ ಭಾಗಿ ವಿವರಿಸುವ ದಾಖಲೆಗಳು ಮತ್ತು ಪುರಾವೆಗಳನ್ನು ಈ ಸಂಸದರಿಗೆ ಸಂಪೂರ್ಣವಾಗಿ ಒದಗಿಸಲಾಗುವುದು.

ಇದು ಜಾಗತಿಕ ವೇದಿಕೆಯಲ್ಲಿ ಭಾರತ ಸರ್ಕಾರದ ಅಭೂತಪೂರ್ವ ರಾಜತಾಂತ್ರಿಕತೆಯನ್ನು ಗುರುತಿಸುತ್ತದೆ ಎಂದು ಸರ್ಕಾರದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಎನ್ ಡಿಎ ಮೈತ್ರಿ ಪಕ್ಷಗಳಾದ ಜೆಡಿಯು, ಟಿಡಿಪಿ ಮತ್ತಿತರರೊಂದಿಗೆ ವಿರೋಧ ಪಕ್ಷದ ಶಶಿ ತರೂರ್ ಅವರನ್ನೊಳಗೊಂಡ ನಿಯೋಗ ಯುಕೆ, ಇಂಗ್ಲೆಂಡ್, ಅಸಾದುದ್ದೀನ್ ಓವೈಸಿ ಅವರನ್ನೊಳಗೊಂಡ ನಿಯೋಗ ಸೌದಿ ಅರಬೀಯಾ ಮತ್ತು ಕತಾರ್ ಗೆ ತೆರಳುವ ಸಾಧ್ಯತೆಯಿದೆ.

ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಮತ್ತಿತರ ಸುಶಿಕ್ಷಿತ ವಿರೋಧ ಪಕ್ಷಗಳ ಸಂಸದರನ್ನು ನಿಯೋಗಕ್ಕೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಪರೇಷನ್ ಸಿಂಧೂರ್ ನಂತರ ಭಾರತದ ನಿಲುವನ್ನು ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸಲು ಎನ್ ಡಿಎ ಮತ್ತು ವಿಪಕ್ಷ ಸಂಸದರನ್ನೊಳಗೊಂಡ ನಿಯೋಗ ಯುಕೆ, ಯುಎಸ್, ಯುಎಇ, ಕತಾರ್ ಮತ್ತಿತರ ರಾಷ್ಟ್ರಗಳಿಗೆ 10 ದಿನಗಳ ಭೇಟಿ ನೀಡಲಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT