ಸಾಂದರ್ಭಿಕ ಚಿತ್ರ 
ದೇಶ

ಭಾರತದ ನಿರುದ್ಯೋಗ ಪ್ರಮಾಣ ಏಪ್ರಿಲ್‌ನಲ್ಲಿ ಶೇ. 5.1: ಕೇಂದ್ರ ಸರ್ಕಾರ ಮಾಹಿತಿ

ಪುರುಷರಲ್ಲಿ ನಿರುದ್ಯೋಗ ಪ್ರಮಾಣ ಶೇ. 5.2 ರಷ್ಟಿದ್ದು, ಮಹಿಳೆಯರ ನಿರುದ್ಯೋಗ ಪ್ರಮಾಣ ಶೇ 5 ರಷ್ಟಿದ್ದೆ. ಮಹಿಳೆಯರಿಗಿಂತ ಪುರುಷರ ನಿರುದ್ಯೋಗ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ ಎಂದು ತೋರಿಸಲಾಗಿದೆ.

ಬೆಂಗಳೂರು: ಭಾರತದಲ್ಲಿ ಏಪ್ರಿಲ್ ನಲ್ಲಿ ನಿರುದ್ಯೋಗ ಪ್ರಮಾಣ ಶೇ. 5.1 ಕ್ಕೆ ತಗ್ಗಿದೆ. ಇದೇ ಮೊದಲ ಬಾರಿಗೆ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ, ಮಾಸಿಕ ಕಾರ್ಮಿಕರ ಸಮೀಕ್ಷೆಯನ್ನು (PLFS) ಬಿಡುಗಡೆ ಮಾಡಿದೆ.

ಇದರಲ್ಲಿ ಪುರುಷರಲ್ಲಿ ನಿರುದ್ಯೋಗ ಪ್ರಮಾಣ ಶೇ. 5.2 ರಷ್ಟಿದ್ದು, ಮಹಿಳೆಯರ ನಿರುದ್ಯೋಗ ಪ್ರಮಾಣ ಶೇ 5 ರಷ್ಟಿದ್ದೆ. ಮಹಿಳೆಯರಿಗಿಂತ ಪುರುಷರ ನಿರುದ್ಯೋಗ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ ಎಂದು ತೋರಿಸಲಾಗಿದೆ.

ಇಲ್ಲಿಯವರೆಗೆ ಸಮೀಕ್ಷೆಯನ್ನು ತ್ರೈಮಾಸಿಕ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿತ್ತು. ಇನ್ನು ಮುಂದೆ ಮಾಸಿಕ PLFS ಬಿಡುಗಡೆಯಿಂದ ಸಮಯೋಚಿತ ನೀತಿ ರೂಪಿಸುವಲ್ಲಿ ನೆರವಾಗುತ್ತದೆ. 15-29 ವಯಸ್ಸಿನವರಲ್ಲಿ ನಿರುದ್ಯೋಗ ಪ್ರಮಾಣ ಶೇ. 13.8 ರಷ್ಟಿದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗದ ಪ್ರಮಾಣ ಶೇ. 12. 3 ರಷ್ಟಿದೆ. ನಗರ ಪ್ರದೇಶಗಳಲ್ಲಿ ಇದು ಶೇ. 17.2 ರಷ್ಟಿದೆ.

ಏಪ್ರಿಲ್ 2025 ರ ಮಾಸಿಕ ಮಾಹಿತಿಯು ಭಾರತದ ಕಾರ್ಮಿಕರ ಸಂಖ್ಯೆಯನ್ನು ಅರ್ಥಮಾಡಿಕೊಳ್ಳುವಲ್ಲಿ ಗಮನಾರ್ಹವಾದ ಮಾಹಿತಿ ನೀಡುತ್ತದೆ ಎಂದು ಇಂಡಿಯಾ ರೇಟಿಂಗ್ಸ್ ಮತ್ತು ರಿಸರ್ಚ್‌ನ ಅಸೋಸಿಯೇಟ್ ಡೈರೆಕ್ಟರ್ ಪರಾಸ್ ಜಸ್ರೈ ಹೇಳಿದ್ದಾರೆ.

"ಒಟ್ಟಾರೆ ನಿರುದ್ಯೋಗ ದರವು 5.1% ರಷ್ಟು ಇದ್ದರೂ, ಗ್ರಾಮೀಣ-ನಗರದ ಅಂತರವು ನಗರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯ ಒತ್ತಡವನ್ನು ಸೂಚಿಸುತ್ತದೆ (ಗ್ರಾಮೀಣ ನಿರುದ್ಯೋಗ ಪ್ರಮಾಣ ಶೇ. 4.5 ,ನಗರ ನಿರುದ್ಯೋಗ ಪ್ರಮಾಣ 6.5%). ವಯಸ್ಸು ಮತ್ತು ಲಿಂಗದ ಆಧಾರದ ಮೇಲೆ ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಹಿಳೆಯರಿಗಿಂತ ಯುವಕರ ನಿರುದ್ಯೋಗ ಪ್ರಮಾಣ (ಶೇ.23.7) ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

"ಆದಾಗ್ಯೂ, ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿಯು ವಿರುದ್ಧವಾಗಿದೆ. ಇದರಲ್ಲಿ ಮಹಿಳೆಯರಿಗೆ ಹೋಲಿಸಿದರೆ ಯುವಕರ ನಿರುದ್ಯೋಗ ಪ್ರಮಾಣ (10.7% v 13.0%) ಕಡಿಮೆಯಾಗಿದೆ. ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಗಳು ಮತ್ತು ಮಹಿಳೆಯರಿಗೆ ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಉದ್ಯೋಗಾವಕಾಶಗಳು ಇದಕ್ಕೆ ಕಾರಣ ಎಂದು ಅವರು ಹೇಳಿದರು.

CIELHR MD ಮತ್ತು CEO ಆದಿತ್ಯ ನಾರಾಯಣ ಮಿಶ್ರಾ, ಮಾಸಿಕ ಮಾಹಿತಿಯು, ಇನ್ನಷ್ಟು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಹಾಗೂ ಉದ್ದೇಶಿತ ಗುರಿ ಸಾಧಿಸುವಲ್ಲಿ ನೆರವಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT