ಜೈರಾಮ್ ರಮೇಶ್- ನರೇಂದ್ರ ಮೋದಿ online desk
ದೇಶ

ಭಯೋತ್ಪಾದನೆ ವಿರುದ್ಧ ವಿದೇಶಗಳಿಗೆ ಸರ್ವಪಕ್ಷ ನಿಯೋಗ; Shashi Tharoor ಆಯ್ಕೆಗೆ ಮೋದಿ ವಿರುದ್ಧ ಕಾಂಗ್ರೆಸ್ ಕೆಂಡ! 'ಕೈ' ಪಟ್ಟಿಯಲ್ಲಿ ವಿವಾದಿತ ಸಂಸದನ ಹೆಸರು!

ತಾನು ನೀಡಿರುವ ಸಂಸದರ ಪಟ್ಟಿಯನ್ನು "ಬದಲಾಯಿಸುವುದಿಲ್ಲ" ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸರ್ಕಾರದ್ದು ಅಪ್ರಾಮಾಣಿಕತೆ" ಎಂದು ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಸರ್ಕಾರ ನಿಯೋಜಿಸಲಿರುವ ನಿಯೋಗಕ್ಕೆ ತಾನು ನೀಡಿದ್ದ ನಾಲ್ಕು ಸಂಸದರ ಹೆಸರುಗಳನ್ನು ಬಿಟ್ಟು ಶಶಿ ತರೂರ್ ಹೆಸರನ್ನು ಅಂತಿಮಗೊಳಿಸಿರುವುದಕ್ಕೆ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದೆ.

ತಾನು ನೀಡಿರುವ ಸಂಸದರ ಪಟ್ಟಿಯನ್ನು "ಬದಲಾಯಿಸುವುದಿಲ್ಲ" ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸರ್ಕಾರದ್ದು ಅಪ್ರಾಮಾಣಿಕತೆ" ಎಂದು ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಬಗ್ಗೆ ವಿಶ್ವ ನಾಯಕರಿಗೆ ಮಾಹಿತಿ ನೀಡುವ ವಿಶ್ವ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ 7 ಸಂಸದರ ಪಟ್ಟಿಯಲ್ಲಿ ಸರ್ಕಾರ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು ಹೆಸರಿಸಿದ ನಂತರ ಕಾಂಗ್ರೆಸ್ ನಿಂದ ಈ ಹೇಳಿಕೆ ಬಂದಿದೆ.

"ನಮ್ಮ ಬಳಿ ಸಂಸದರ ಹೆಸರುಗಳನ್ನು ಕೇಳಲಾಗಿತ್ತು. ನಾವು ನೀಡಿದ್ದ ಹೆಸರುಗಳನ್ನು ಸೇರಿಸಲಾಗುವುದು ಎಂದು ನಾವು ನಿರೀಕ್ಷಿಸಿದ್ದೆವು. ಪಕ್ಷವು ನೀಡಿದ ಹೆಸರುಗಳನ್ನು ಸೇರಿಸಲಾಗುವುದು ಎಂದು ನಾವು ಆಶಿಸಿದ್ದೆವು. ಆದರೆ ಪಿಐಬಿಯ ಪತ್ರಿಕಾ ಪ್ರಕಟಣೆಯನ್ನು ನೋಡಿದಾಗ, ನಮಗೆ ಆಶ್ಚರ್ಯವಾಯಿತು. ಈಗ ಏನಾಗುತ್ತದೆ ಎಂದು ನಾನು ಹೇಳಲು ಸಾಧ್ಯವಿಲ್ಲ. ನಾಲ್ಕು ಹೆಸರುಗಳನ್ನು ಕೇಳುವುದು, ನಾಲ್ಕು ಹೆಸರುಗಳನ್ನು ನೀಡುವುದು ಮತ್ತು ಇನ್ನೊಂದು ಹೆಸರನ್ನು ಘೋಷಿಸುವುದು ಸರ್ಕಾರದ ಕಡೆಯಿಂದ ಅಪ್ರಾಮಾಣಿಕವಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ತೆಗೆದುಕೊಂಡ ನಂತರವೂ ರಿಜಿಜು ರಾಹುಲ್ ಜಿ ಮತ್ತು ಖರ್ಗೆ ಅವರೊಂದಿಗೆ ಮಾತನಾಡಿರಬಹುದು, ಆದರೆ ನಾನು ಅವರಿಗೆ ಅನುಮಾನದ ಲಾಭವನ್ನು ನೀಡುತ್ತಿದ್ದೇನೆ. ಆದರೆ ಈಗ ನಡೆದದ್ದು ಅಪ್ರಾಮಾಣಿಕ. ನಾವು ಈ ನಾಲ್ಕು ಹೆಸರುಗಳನ್ನು ಬದಲಾಯಿಸುವುದಿಲ್ಲ" ಎಂದು ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಕಾಂಗ್ರೆಸ್ ಪಟ್ಟಿಯಲ್ಲಿ ವಿವಾದಕ್ಕೀಡಾಗಿದ್ದ ಸಂಸದನ ಹೆಸರು

ಕಾಂಗ್ರೆಸ್ ಪಕ್ಷವು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಲೋಕಸಭೆಯಲ್ಲಿ ಐಎನ್‌ಸಿ ಉಪ ನಾಯಕ ಗೌರವ್ ಗೊಗೊಯ್, ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್ ಮತ್ತು ಲೋಕಸಭಾ ಸಂಸದ ರಾಜಾ ಬ್ರಾರ್ ಅವರ ಹೆಸರುಗಳನ್ನು ಸೂಚಿಸಿತ್ತು.

ಈ ಪೈಕಿ ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್ ಕರ್ನಾಟಕದ ಸಂಸದರಾಗಿದ್ದು, ಇವರು ರಾಜ್ಯಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ ಇವರ ಬೆಂಬಲಿಗರು ವಿಧಾನಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿ ವಿವಾದ ಉಂಟಾಗಿತ್ತು ಎಂಬುದು ಗಮನಾರ್ಹ ಸಂಗತಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT