ಜಗದೀಪ್ ಧಂಖರ್ 
ದೇಶ

New Delhi: ಒಸಾಮಾ ಬಿನ್ ಲಾಡೆನ್ ಹತ್ಯೆ ಜೊತೆಗೆ 'ಆಪರೇಷನ್ ಸಿಂಧೂರ್' ಹೋಲಿಸಿದ ಉಪ ರಾಷ್ಟ್ರಪತಿ ಧಂಖರ್!

ಸೆಪ್ಟೆಂಬರ್ 11, 2001 ರಂದು ಅಮೆರಿಕದ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದಕ ದಾಳಿಯನ್ನು ನೆನಪಿಸಿಕೊಂಡರು.

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಯುಎಸ್ ಪಡೆಗಳ ಒಸಾಮಾ ಬಿನ್ ಲಾಡೆನ್ ಹತ್ಯೆ ಕಾರ್ಯಾಚರಣೆ ಜೊತೆಗೆ ಆಪರೇಷನ್ ಸಿಂಧೂರ್ ವನ್ನು ಹೋಲಿಸಿದ್ದಾರೆ.

ಇಲ್ಲಿನ ಜೈಪುರಿಯ ಇನ್ಸಿಟಿಟ್ಯೂಟ್ ನಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಧಂಖರ್, ಪಾಕಿಸ್ತಾನದ ಒಂಬತ್ತು ಭಯೋತ್ಪಾದಕರ ನೆಲೆಗಳ ಮೇಲಿನ ದಾಳಿಯನ್ನು ಭಾರತದ ಗಮನಾರ್ಹವಾದ ಗಡಿಯಾಚೆಗಿನ ದಾಳಿ" ಎಂದು ವಿವರಿಸಿದರು. ಸೆಪ್ಟೆಂಬರ್ 11, 2001 ರಂದು ಅಮೆರಿಕದ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದಕ ದಾಳಿಯನ್ನು ನೆನಪಿಸಿಕೊಂಡರು.

ಸೆಪ್ಟೆಂಬರ್ 11ರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಬಿನ್ ಲಾಡೆನ್ ನನ್ನು ಮೇ 2, 2011 ರಂದು ಅಮೆರಿಕದ ಭದ್ರತಾ ಪಡೆಗಳು ಯೋಜಿಸಿ ಹತ್ಯೆ ಮಾಡಿದ್ದವು. ಅದೇ ರೀತಿಯಲ್ಲಿ ಭಾರತ ಮಾಡಿದೆ. ಪ್ರಪಂಚಕ್ಕೆ ನವ ಭಾರತದ ಸಾಮರ್ಥ್ಯವನ್ನು ತೋರಿಸಿದೆ. ಶಾಂತಿಯ ಮನೋಭಾವವನ್ನು ಉಳಿಸಿಕೊಂಡು, ಭಯೋತ್ಪಾದನೆಯನ್ನು ಹೊಡೆದುರುಳಿಸುವುದು ಇದರ ಉದ್ದೇಶವಾಗಿತ್ತು ಎಂದರು.

ಮೊದಲ ಬಾರಿಗೆ, ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದ ಭದ್ರಕೋಟೆಗಳ ಮೇಲೆ ಅಂತಾರಾಷ್ಟ್ರೀಯ ಗಡಿಯಾದ್ಯಂತ ದಾಳಿ ನಡೆಸಲಾಯಿತು. ದಾಳಿಗಳು ಎಷ್ಟು ನಿಖರವಾಗಿವೆ ಎಂದರೆ ಕೇವಲ ಭಯೋತ್ಪಾದಕರಿಗೆ ಮಾತ್ರ ಹಾನಿಯಾಗಿದೆ ಎಂದು ಅವರು ಹೇಳಿದರು

ಜಗತ್ತು ನಮ್ಮ ‘ಆಕಾಶ್’ಅದರ ಸಾಮರ್ಥ್ಯ, ಅದರ ಪರಿಣಾಮಕಾರಿತ್ವವನ್ನು ತಿಳಿದುಕೊಂಡಿದೆ. ನಮ್ಮ ‘ಬ್ರಹ್ಮೋಸ್’ಗುರುತಿಸಲು ಮುಂದಾಗಿದೆ. ಈ ದೇಶಕ್ಕೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಿಗೆ ಶೋಧನೆ ಮತ್ತು ಆಳವಾದ ಚಿಂತನೆಯ ಅಗತ್ಯವಿರುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ, ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್ ಲಭ್ಯ!

News headlines 20-11-2025| ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ 5 ವರ್ಷ ನಾನೇ ಸಿಎಂ-ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ; AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

SCROLL FOR NEXT