ಸಾಂದರ್ಭಿಕ ಚಿತ್ರ 
ದೇಶ

ನಾಳೆ ಬೆಳಗ್ಗೆ ಇಸ್ರೋದ 101ನೇ ಉಪಗ್ರಹ ಉಡಾವಣೆ

ಈ ಕಾರ್ಯಾಚರಣೆಯಡಿಯಲ್ಲಿ ವಿಜ್ಞಾನಿಗಳು ಭಾರತದ ಎಲ್ಲಾ ಹವಾಮಾನ ಭೂ ವೀಕ್ಷಣಾ ಸಾಮರ್ಥ್ಯ ಹೊಂದಿರುವ ಉಪಗ್ರಹವನ್ನು ಸೂರ್ಯನ ಸಿಂಕ್ರೊನಸ್ ಧ್ರುವ ಕಕ್ಷೆಯಲ್ಲಿ(SPO) ಇರಿಸಲಿದ್ದಾರೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಲು ಸಜ್ಜಾಗಿದ್ದು, ಮೇ 18 ರಂದು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-C61/EOS-09 ಕಾರ್ಯಾಚರಣೆಯೊಂದಿಗೆ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ.

ಈ ಕಾರ್ಯಾಚರಣೆಯಡಿಯಲ್ಲಿ ವಿಜ್ಞಾನಿಗಳು ಭಾರತದ ಎಲ್ಲಾ ಹವಾಮಾನ ಭೂ ವೀಕ್ಷಣಾ ಸಾಮರ್ಥ್ಯ ಹೊಂದಿರುವ ಉಪಗ್ರಹವನ್ನು ಸೂರ್ಯನ ಸಿಂಕ್ರೊನಸ್ ಧ್ರುವ ಕಕ್ಷೆಯಲ್ಲಿ(SPO) ಇರಿಸಲಿದ್ದಾರೆ.

ನಾಳೆ ಬೆಳಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಉಪಗ್ರಹ ಉಡಾವಣೆ ನಿಗದಿಯಾಗಿದ್ದು, ಇಸ್ರೋದ ಅಧಿಕೃತ ​ಯೂಟ್ಯೂಬ್​ ಚಾನೆಲ್​ನಲ್ಲಿ ಇದರ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಇಸ್ರೋ ಹಂಚಿಕೊಂಡ ಮಾಹಿತಿಯ ಪ್ರಕಾರ, ಉಡಾವಣಾ ವಾಹನವು 44.5 ಮೀಟರ್ ಎತ್ತರವಾಗಿದೆ ಮತ್ತು 321 ಟನ್‌ಗಳಷ್ಟು ಲಿಫ್ಟ್ ಆಫ್ ದ್ರವ್ಯರಾಶಿಯನ್ನು ಹೊಂದಿದೆ. ಇದು ಇಸ್ರೋ ನಿರ್ಮಿಸಿದ ಅತ್ಯಂತ ಭಾರವಾದ ಉಪಗ್ರಹವಾಗಿದೆ.

ಈ ಉಪಗ್ರಹವು ಸಿಂಥೆಟಿಕ್ ಅಪರ್ಚರ್ ರಾಡಾರ್ (SAR) ಅನ್ನು ಹೊಂದಿದ್ದು, 1696.24 ಕೆಜಿ. ತೂಕವಿದೆ. ಇದರ ಜೀವಿತಾವಧಿ ಐದು ವರ್ಷಗಳಾಗಿದ್ದು, ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರಾಡಾರ್​ನಿಂದ (SAR) ಸಜ್ಜುಗೊಂಡಿದ್ದು, ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಹಗಲು-ರಾತ್ರಿ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳ ಸೆರೆಹಿಡಿಯಲು ಅನುವು ಮಾಡಿಕೊಡಲಿದೆ.

EOS-09ನ ಮುಖ್ಯ ಉದ್ದೇಶ ಕೃಷಿ, ಅರಣ್ಯ ಮೇಲ್ವಿಚಾರಣೆ, ವಿಪತ್ತು ನಿರ್ವಹಣೆ, ನಗರ ಯೋಜನೆ ಮತ್ತು ರಾಷ್ಟ್ರೀಯ ಭದ್ರತೆಯಂತಹ ಕ್ಷೇತ್ರಗಳಿಗೆ ನೆರವಾಗುವುದಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಂತಹ ಇತ್ತೀಚಿನ ಭದ್ರತಾ ಘಟನೆಗಳ ಮೇಲ್ವಿಚಾರಣೆ ಮಾಡಲಿದೆ. ಸೂಕ್ಷ್ಮ ಗಡಿಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸುವ ನಿಟ್ಟಿನಲ್ಲಿ ಉಪಗ್ರಹ ಕಾರ್ಯ ನಿರ್ವಹಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!