ರಾಹುಲ್ ಗಾಂಧಿ, ಎಸ್ ಜೈಶಂಕರ್ 
ದೇಶ

Operation Sindoor ಮುನ್ನಾ ಪಾಕಿಸ್ತಾನಕ್ಕೆ ಮಾಹಿತಿ; ವಿಡಿಯೋ ಹಂಚಿಕೊಂಡ ರಾಹುಲ್! PIB ಫ್ಯಾಕ್ಟ್ ಚೆಕ್, MEA ಹೇಳಿದ್ದು ಏನು?

ಭಯೋತ್ಪಾದಕ ಮೂಲಸೌಕರ್ಯಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನಕ್ಕೆ ತಿಳಿಸಿದೆ ಎಂದು ಎಂದು ಜೈಶಂಕರ್ ಹೇಳಿರುವ ದಿನಾಂಕವಿಲ್ಲದ ವೀಡಿಯೊವೊಂದನ್ನು ಅವರು ಹಂಚಿಕೊಂಡಿದ್ದಾರೆ.

ನವದೆಹಲಿ: ಆಪರೇಷನ್ ಸಿಂಧೂರ್‌ನ ಭಾಗವಾಗಿ ಭಯೋತ್ಪಾದಕರ ಮೂಲಸೌಕರ್ಯವನ್ನು ಗುರಿಯಾಗಿಸುವ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ಅಪರಾಧವಾಗಿದ್ದು, ಅದಕ್ಕೆ ಯಾರು ಅಧಿಕಾರ ನೀಡಿದವರು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ..

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಭಾರತ ಸರ್ಕಾರ ಪಾಕಿಸ್ತಾನಕ್ಕೆ ಈ ಕ್ರಮದ ಬಗ್ಗೆ ತಿಳಿಸಿತ್ತು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದರು. ಇದರ ಪರಿಣಾಮ ಭಾರತೀಯ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು ಎಂದು ಪ್ರಶ್ನಿಸಿದ್ದಾರೆ.

ಭಯೋತ್ಪಾದಕ ಮೂಲಸೌಕರ್ಯಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನಕ್ಕೆ ತಿಳಿಸಿದೆ ಎಂದು ಎಂದು ಜೈಶಂಕರ್ ಹೇಳಿರುವ ದಿನಾಂಕವಿಲ್ಲದ ವೀಡಿಯೊವೊಂದನ್ನು ಅವರು ಹಂಚಿಕೊಂಡಿದ್ದಾರೆ.

ಕಾರ್ಯಾಚರಣೆ ಆರಂಭದಲ್ಲಿ ನಾವು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೇವೆ. ನಾವು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಮತ್ತು ನಾವು ಮಿಲಿಟರಿ ಮೇಲೆ ದಾಳಿ ಮಾಡುತ್ತಿಲ್ಲ ಎದು ಹೇಳಿರುವುದು ವಿಡಿಯೋದಲ್ಲಿದೆ.

ಆದರೆ ಜೈಶಂಕರ್ ಆ ರೀತಿ ಹೇಳಿದ್ದಾರೆ ಎಂಬುದನ್ನು ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (PIB) ತಳ್ಳಿ ಹಾಕಿದೆ. ಸಚಿವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಅವರನ್ನು ತಪ್ಪಾಗಿ ಉಲ್ಲೇಖಿಸಲಾಗುತ್ತಿದೆ ಎಂದು PIB ಫ್ಯಾಕ್ಟ್ ಚೆಕ್ ಯೂನಿಟ್ ಹೇಳಿದೆ.

ಆಪರೇಷನ್ ಸಿಂಧೂರ್ ಆರಂಭದಲ್ಲಿ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೇವು ಎಂದು ಡಾ ಎಸ್ ಜೈಶಂಕರ್ ಹೇಳಿದ್ದಾರೆ. ಇದನ್ನು ಆಪರೇಷನ್ ಮುನ್ನಾ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು MEA ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ, ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ, AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಘೋಷಣೆ, ಯಾವಾಗಿಂದ ಗೊತ್ತಾ?

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ; Video

SCROLL FOR NEXT