ಸಂಗ್ರಹ ಚಿತ್ರ 
ದೇಶ

ಭಾರತ-ಪಾಕಿಸ್ತಾನ ಕದನ ವಿರಾಮ ಮುಂದುವರಿಯಲಿದೆ: ಸೇನೆ

ಭಾನುವಾರ ಉಭಯ ದೇಶಗಳ ಡಿಜಿಎಂಒಗಳ ನಡುವೆ ಯಾವುದೇ ಹೊಸ ಮಾತುಕತೆ ನಿಗದಿಯಾಗಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು.

ನವದೆಹಲಿ: ಮೇ 12 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಕದನ ವಿರಾಮ ಒಪ್ಪಂದ ಮುಂದುವರೆಯಲಿದೆ ಎಂದು ಸೇನಾ ಹಿರಿಯ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ಕದನ ವಿರಾಮ ತಾತ್ಕಾಲಿಕವಾಗಿದ್ದು, ಕೊನೆಗೊಳ್ಳುವ ನಿರೀಕ್ಷೆಯಿದೆ ಎಂಬ ಊಹಾಪೋಹಗಳು ಕುರಿತು ಪ್ರತಿಕ್ರಿಯೆ ನೀಡಿರುವ ಸೇನಾಧಿಕಾರಿ, ಡಿಜಿಎಂಒಗಳ (ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು) ಮಾತುಕತೆ ಸಮಯದಲ್ಲಿ ಒಪ್ಪಿಕೊಂಡ ಯುದ್ಧ ಕುರಿತ ನಿಲುವಿಗೆ ಯಾವುದೇ ಮುಕ್ತಾಯ ದಿನಾಂಕವಿಲ್ಲ ಎಂದು ಹೇಳಿದರು.

ಭಾನುವಾರ ಉಭಯ ದೇಶಗಳ ಡಿಜಿಎಂಒಗಳ ನಡುವೆ ಯಾವುದೇ ಹೊಸ ಮಾತುಕತೆ ನಿಗದಿಯಾಗಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು.

ಮೇ 12 ರಂದು ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲಿನ ಕಾರ್ಯಾಚರಣೆಯನ್ನು ಸದ್ಯಕ್ಕಷ್ಟೇ ನಿಲ್ಲಿಸಿದ್ದು, ನೆರೆಯ ರಾಷ್ಟ್ರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದರು.

ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ನಮ್ಮ ದಾಳಿಯನ್ನು ಸದ್ಯಕ್ಕಷ್ಟೇ ನಿಲ್ಲಿಸಿದ್ದೇವೆ. ನೆರೆಯ ರಾಷ್ಟ್ರದ ಯಾವುದೇ ಪರಮಾಣು ಬೆದರಿಕೆಗಳು ಅಥವಾ ಬ್ಲ್ಯಾಕ್‌ಮೇಲಿಂಗ್ ಅನ್ನು ಸಹಿಸಲಾಗುವುದಿಲ್ಲ, ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಸಹಿಸುವುದಿಲ್ಲ. ಇದಕ್ಕೆ ಸೂಕ್ತ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

SCROLL FOR NEXT