ಇಒಎಸ್ -09 (ಭೂಸರ್ವೇಕ್ಷಣಾ) ಉಪಗ್ರಹ ಪಿಎಸ್‌ಎಲ್‌ವಿ -ಸಿ61 ರಾಕೆಟ್ 
ದೇಶ

PSLVC61 EOS-09 satellite: ಯಶಸ್ವಿಯಾಗಿ ಉಡಾವಣೆಗೊಂಡ ಇಸ್ರೋ 101ನೇ ಉಪಗ್ರಹಕ್ಕೆ ತಾಂತ್ರಿಕ ದೋಷ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾನುವಾರ ಬೆಳಗ್ಗೆ 5.59ಕ್ಕೆ ಇಒಎಸ್ -09 (ಭೂಸರ್ವೇಕ್ಷಣಾ) ಉಪಗ್ರಹ ಉಡಾವಣೆ ಮಾಡಿ ಸಾಧನೆ ಮಾಡಿತ್ತು.

ಶ್ರೀಹರಿಕೋಟಾ: ಇಸ್ರೋ 101ನೇ ಉಪಗ್ರಹ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿದೆ. ಆದರೆ, ಯಶಸ್ವಿಯಾಗಿ ಉಡಾವಣೆ ಮಾಡಿದ ಉಪಗ್ರಹದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾನುವಾರ ಬೆಳಗ್ಗೆ 5.59ಕ್ಕೆ ಇಒಎಸ್ -09 (ಭೂಸರ್ವೇಕ್ಷಣಾ) ಉಪಗ್ರಹ ಉಡಾವಣೆ ಮಾಡಿ ಸಾಧನೆ ಮಾಡಿತ್ತು. ಈ ಐತಿಹಾಸಿಕ ಮೈಲಿಗಲ್ಲನ್ನು ಇಸ್ರೋ ಯಶಸ್ವಿಯಾಗಿ ನೆರವೇರಿಸಿತ್ತು.

ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಇಸ್ರೋದ ಇಒಎಸ್ -09 (ಭೂಸರ್ವೇಕ್ಷಣಾ) ಉಪಗ್ರಹ ಪಿಎಸ್‌ಎಲ್‌ವಿ -ಸಿ61 ರಾಕೆಟ್ ಹೊತ್ತು ಯಶಸ್ವಿಯಾಗಿ ಉಡಾವಣೆಗೊಂಡಿತು. ಆದರೆ, ಇದೀಗ 3ನೇ ಹಂತದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗುತ್ತಿದೆ.

ಇಒಎಸ್-09 ಉಪಗ್ರಹದ ಉಡಾವಣೆಯ 3 ನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಕಂಡು ಬಂದಿದ್ದು, ಇದರಿಂದಾಗಿ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಇಸ್ರೋ ಮುಖ್ಯಸ್ಥ ವಿ ನಾರಾಯಣನ್ ಅವರು ಹೇಳಿದ್ದಾರೆ.

ಮೂರನೇ ಹಂತದ ಕಾರ್ಯನಿರ್ವಹಣೆಯ ಸಮಯದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ಕಾರ್ಯಾಚರಣೆಯನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಈ ಕುರಿತು ವಿಶ್ಲೇಷಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ಪೋಸ್ಟ್ ಮಾಡಿರುವ ಇಸ್ರೋ, ಇಂದು 101 ನೇ ಉಡಾವಣೆಯನ್ನು ಪ್ರಯತ್ನಿಸಲಾಯಿತು, ಪಿಎಸ್‌ಎಲ್‌ವಿ-ಸಿ 61 ಕಾರ್ಯಕ್ಷಮತೆ 2 ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3 ನೇ ಹಂತದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗದ್ದು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದೆ.

PSLV-C-61 ರ ಹಾರಾಟದ ಅನುಕ್ರಮವು ವಿವಿಧ ಹಂತಗಳನ್ನು ಒಳಗೊಂಡಿದೆ, PS1 ಮತ್ತು PSOM ಅನ್ನು ನೆಲದಲ್ಲಿ ಉಡಾಯಿಸುವುದರಿಂದ ಹಿಡಿದು, ವಿವಿಧ ವಿಭಾಗಗಳನ್ನು ಬೇರ್ಪಡಿಸುವ ಹಂತವನ್ನು ಹೊಂದಿಗೆ. ಅಂತಿಮವಾಗಿ ಉಪಗ್ರಹವನ್ನು ರಾಕೆಟ್‌ನಿಂದ ಬೇರ್ಪಡಿಸುತ್ತದೆ. ಇದರಂತೆ ಮೂರನೇ ಹಂತದಲ್ಲಿ ಸಮಸ್ಯೆ ಎದುರಾಗಿದೆ. ಇದು ಘನ ರಾಕೆಟ್ ಮೋಟಾರ್ ಆಗಿದ್ದು, ಇದು ಉಡಾವಣೆಯ ಹಂತದ ನಂತರ ಮೇಲಿನ ಹಂತಕ್ಕೆ ಒತ್ತಡ ಹೆಚ್ಚಾಗುತ್ತದೆ. ಈ ಹಂತವು 240 ಕಿಲೋನ್ಯೂಟನ್‌ಗಳ ಗರಿಷ್ಠ ಒತ್ತಡವನ್ನು ಹೊಂದಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

Mutual Fund ಗಳಲ್ಲಿ ಚಿನ್ನ, ಬೆಳ್ಳಿ ಮೌಲ್ಯಮಾಪನ ಪದ್ಧತಿಯಲ್ಲಿ ಭಾರಿ ಬದಲಾವಣೆ; ಇದರಿಂದಾಗುವ ಲಾಭವೇನು?

ಕೋಲ್ಕತ್ತಾ: ಕೇಂದ್ರ ಸಚಿವ ಸುಕಾಂತ ಮಜುಂದಾರ್ ಭಾಷಣ ಮಾತನಾಡುತ್ತಿದ್ದಾಗ ಭೂಕಂಪ: ಅನುಭವ ಹೇಗಿತ್ತು ಗೊತ್ತಾ? Video ನೋಡಿ..

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್; Video

SCROLL FOR NEXT