ಸಿಂಗಂಪುನಾರಿಯ ಮೆಹವರ್ಣಮ್ ಒಡೆತನದ ಕ್ವಾರಿಯಲ್ಲಿ ಘಟನೆ ಸಂಭವಿಸಿದ್ದು, ಅಲ್ಲಿ ಆರು ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದರು.  Photo | Special Arrangement
ದೇಶ

ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಅವಘಡ; ಬಂಡೆಗಳು ಕುಸಿದು ಐವರು ಸಾವು, ಇಬ್ಬರಿಗೆ ಗಂಭೀರ ಗಾಯ

ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಮಧುರೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಗಂಗಾ (ತಮಿಳುನಾಡು): ಜಿಲ್ಲೆಯ ಕಲ್ಲು ಕ್ವಾರಿ ಸ್ಥಳದಲ್ಲಿ ಮಂಗಳವಾರ ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐವರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿ ಸ್ಥಳದಲ್ಲಿ ಸಂತ್ರಸ್ತರು, ಹೆಚ್ಚಾಗಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಕಲ್ಲುಗಳನ್ನು ತೆರವುಗೊಳಿಸಿದ ನಂತರ ಮೂವರ ಶವಗಳನ್ನು ಹೊರತೆಗೆದಿದ್ದಾರೆ.

ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಮಧುರೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿಯಿಡೀ ಬಿದ್ದ ಮಳೆ ಅಥವಾ ಕಾರ್ಮಿಕರು ಬಳಸಿದ ಸ್ಫೋಟಕಗಳೇ ಕುಸಿತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!