ಸುಪ್ರೀಂ ಕೋರ್ಟ್- ವಕ್ಫ್  online desk
ದೇಶ

ಸರ್ಕಾರಕ್ಕೆ ಅಕ್ರಮ ವಕ್ಫ್ ಆಸ್ತಿಗಳನ್ನು ಮರಳಿ ಪಡೆಯಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ

ಜಂಟಿ ಸಂಸದೀಯ ಸಮಿತಿಯ ವರದಿ ಮತ್ತು ಕಾಯ್ದೆ ಜಾರಿಗೆ ಬರುವ ಮೊದಲು ಅನೇಕ ರಾಜ್ಯ ಸರ್ಕಾರಗಳು ಮತ್ತು ರಾಜ್ಯ ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಲಾಗಿತ್ತು ಎಂಬ ಅಂಶವನ್ನು ತುಷಾರ್ ಮೆಹ್ತಾ ಉಲ್ಲೇಖಿಸಿದ್ದಾರೆ.

ನವದೆಹಲಿ: ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ವಕ್ಫ್ ತತ್ವವನ್ನು ಬಳಸಿಕೊಂಡು ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರಳಿ ಪಡೆಯಲು ಕಾನೂನುಬದ್ಧವಾಗಿ ಅಧಿಕಾರ ಹೊಂದಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಔಪಚಾರಿಕ ದಾಖಲೆಗಳಿಲ್ಲದೆಯೂ ಸಹ ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ದೀರ್ಘಕಾಲೀನ ಬಳಕೆಯ ಆಧಾರದ ಮೇಲೆ ಆಸ್ತಿಯನ್ನು ವಕ್ಫ್ ಎಂದು ಗುರುತಿಸುವ ಬಳಕೆದಾರರಿಂದ ವಕ್ಫ್ (waqf by user) ಪರಿಕಲ್ಪನೆಯಾಗಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆ, 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಕೇಂದ್ರದ ಪರವಾಗಿ ತಮ್ಮ ವಾದ ಮಂಡಿಸಿದ್ದಾರೆ.

"ಸರ್ಕಾರಿ ಭೂಮಿಯ ಮೇಲೆ ಯಾರಿಗೂ ಹಕ್ಕಿಲ್ಲ" ಎಂದು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಕಾನೂನು ಅಧಿಕಾರಿ ಹೇಳಿದ್ದಾರೆ".

"ಸರ್ಕಾರಕ್ಕೆ ಸೇರಿದ್ದರೆ ಮತ್ತು ವಕ್ಫ್ ಎಂದು ಘೋಷಿಸಿದ್ದರೆ ಸರ್ಕಾರವು ಆಸ್ತಿಯನ್ನು ಉಳಿಸಬಹುದು ಎಂದು ಹೇಳುವ ಸುಪ್ರೀಂ ಕೋರ್ಟ್ ತೀರ್ಪು ಇದೆ" ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.

ಯಾವುದೇ ಬಾಧಿತ ಪಕ್ಷಗಳು ನ್ಯಾಯಾಲಯದ ಮೆಟ್ಟಿಲೇರಿಲ್ಲ ಮತ್ತು 'ಸಂಸತ್ತು ಈ ಶಾಸನವನ್ನು ಅಂಗೀಕರಿಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಯಾರೂ ಹೇಳಲಾಗದು' ಎಂದು ಹೇಳಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ವರದಿ ಮತ್ತು ಕಾಯ್ದೆ ಜಾರಿಗೆ ಬರುವ ಮೊದಲು ಅನೇಕ ರಾಜ್ಯ ಸರ್ಕಾರಗಳು ಮತ್ತು ರಾಜ್ಯ ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಲಾಗಿತ್ತು ಎಂಬ ಅಂಶವನ್ನು ತುಷಾರ್ ಮೆಹ್ತಾ ಉಲ್ಲೇಖಿಸಿದ್ದಾರೆ.

ಜಿಲ್ಲಾಧಿಕಾರಿಗಳ ಶ್ರೇಣಿಗಿಂತ ಮೇಲಿನ ಅಧಿಕಾರಿಯೊಬ್ಬರು ವಕ್ಫ್ ಆಸ್ತಿಗಳು ಸರ್ಕಾರದವು ಎಂಬ ಆಧಾರದ ಮೇಲೆ ಅವುಗಳ ಮೇಲಿನ ಹಕ್ಕನ್ನು ನಿರ್ಧರಿಸಬಹುದು ಎಂಬ ಅರ್ಜಿದಾರರ ಮನವಿಯ ಕುರಿತು ಪೀಠವು ಕೇಂದ್ರದಿಂದ ಪ್ರತಿಕ್ರಿಯೆಯನ್ನು ಕೋರಿತ್ತು. "ಇದು ಕೇವಲ ದಾರಿ ತಪ್ಪಿಸುವ ವಾದವಲ್ಲ ಆದರೆ ಸುಳ್ಳು ವಾದ" ಎಂದು ಮೆಹ್ತಾ ಹೇಳಿದ್ದಾರೆ.

ಕೇಂದ್ರವು ತನ್ನ ಲಿಖಿತ ಟಿಪ್ಪಣಿಯಲ್ಲಿ, ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ವಕ್ಫ್ ಅದರ ಸ್ವಭಾವತಃ 'ಜಾತ್ಯತೀತ ಪರಿಕಲ್ಪನೆ' ಮತ್ತು ಅದರ ಪರವಾಗಿ 'ಸಾಂವಿಧಾನಿಕತೆಯ ಊಹೆ' ಇರುವುದರಿಂದ ಅದನ್ನು ತಡೆಹಿಡಿಯಲಾಗುವುದಿಲ್ಲ ಎಂದು ಹೇಳಿದೆ.

ನ್ಯಾಯಾಲಯ ಈ ಹಿಂದೆ ಎತ್ತಿದ್ದ ಸಮಸ್ಯೆಗಳನ್ನು ಅದು ಪರಿಹರಿಸಿತು ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುವಾಗ ವಕ್ಫ್ ಆಡಳಿತದ ಜಾತ್ಯತೀತ ಅಂಶಗಳನ್ನು ಮಾತ್ರ ನಿಯಂತ್ರಿಸಲು ಕಾನೂನು ಪ್ರಯತ್ನಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಬೇಕಾದ 'ಗಂಭೀರ ರಾಷ್ಟ್ರೀಯ ತುರ್ತು' ಇಲ್ಲ ಎಂದು ತುಷಾರ್ ಮೆಹ್ತಾ ಕೋರ್ಟ್ ಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್