ಪ್ರಧಾನಿ ಮೋದಿ, ಜೈರಾಮ್ ರಮೇಶ್ ಸಾಂದರ್ಭಿಕ ಚಿತ್ರ 
ದೇಶ

ಪ್ರಶ್ನೆ, ಟೀಕೆಗಳಿಂದ ಗಮನ ಬೇರೆಡೆಗೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷಗಳ ನಿಯೋಗ ಕಳುಹಿಸುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಜೈರಾಮ್ ರಮೇಶ್ ಕಿಡಿ

ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆ.

ನವದೆಹಲಿ: ತಮ್ಮ ನಾಯಕತ್ವದ ಬಗ್ಗೆ ಹೆಚ್ಚುತ್ತಿರುವ ಟೀಕೆಗಳು ಮತ್ತು ಪ್ರಶ್ನೆಗಳಿಂದ ಗಮನ ಬೇರೆಡೆ ಸೆಳೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದ್ದಕ್ಕಿದ್ದಂತೆ ವಿದೇಶಗಳಿಗೆ ವಿಪಕ್ಷಗಳ ನಿಯೋಗಗಳನ್ನು ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 34 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರತಿ ಅಕ್ಟೋಬರ್-ನವೆಂಬರ್‌ನಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಗೆ ವಿವಿಧ ಪಕ್ಷಗಳ ಸಂಸದರನ್ನು ಕಳುಹಿಸುವ ಪದ್ಧತಿ 1950 ರ ದಶಕದಿಂದಲೂ ಜಾರಿಯಲ್ಲಿದೆ. ಆದರೆ, 2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಈ ಸಂಪ್ರದಾಯವನ್ನು ನಿಲ್ಲಿಸಲಾಯಿತು.

ಈಗ, ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ರಾಜೀವ್ ಗಾಂಧಿಯವರಿಗೆ ಗೌರವಸಲ್ಲಿಸಿರುವ ಅವರು, ರಾಜೀವ್ ಗಾಂಧಿಯವರ "ಮಾನವೀಯತೆ, ಒಳ್ಳೆಯತನ ಮತ್ತು ಸಭ್ಯತೆ ಗುಣಗಳು ಪ್ರಸ್ತುತ ಪ್ರಧಾನಿಯಲ್ಲಿ ಕಾಣೆಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ವಾಜಪೇಯಿ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದರೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿದೇಶದಲ್ಲಿ ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ಮಾಡಿದ ಹಾಗೂ ಚಿಕಿತ್ಸೆ ಬಗ್ಗೆ ವಾಜಪೇಯಿಯವರು ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT