ಪ್ರಧಾನಿ ಮೋದಿ, ಜೈರಾಮ್ ರಮೇಶ್ ಸಾಂದರ್ಭಿಕ ಚಿತ್ರ 
ದೇಶ

ಪ್ರಶ್ನೆ, ಟೀಕೆಗಳಿಂದ ಗಮನ ಬೇರೆಡೆಗೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷಗಳ ನಿಯೋಗ ಕಳುಹಿಸುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಜೈರಾಮ್ ರಮೇಶ್ ಕಿಡಿ

ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆ.

ನವದೆಹಲಿ: ತಮ್ಮ ನಾಯಕತ್ವದ ಬಗ್ಗೆ ಹೆಚ್ಚುತ್ತಿರುವ ಟೀಕೆಗಳು ಮತ್ತು ಪ್ರಶ್ನೆಗಳಿಂದ ಗಮನ ಬೇರೆಡೆ ಸೆಳೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದ್ದಕ್ಕಿದ್ದಂತೆ ವಿದೇಶಗಳಿಗೆ ವಿಪಕ್ಷಗಳ ನಿಯೋಗಗಳನ್ನು ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 34 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರತಿ ಅಕ್ಟೋಬರ್-ನವೆಂಬರ್‌ನಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಗೆ ವಿವಿಧ ಪಕ್ಷಗಳ ಸಂಸದರನ್ನು ಕಳುಹಿಸುವ ಪದ್ಧತಿ 1950 ರ ದಶಕದಿಂದಲೂ ಜಾರಿಯಲ್ಲಿದೆ. ಆದರೆ, 2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಈ ಸಂಪ್ರದಾಯವನ್ನು ನಿಲ್ಲಿಸಲಾಯಿತು.

ಈಗ, ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ರಾಜೀವ್ ಗಾಂಧಿಯವರಿಗೆ ಗೌರವಸಲ್ಲಿಸಿರುವ ಅವರು, ರಾಜೀವ್ ಗಾಂಧಿಯವರ "ಮಾನವೀಯತೆ, ಒಳ್ಳೆಯತನ ಮತ್ತು ಸಭ್ಯತೆ ಗುಣಗಳು ಪ್ರಸ್ತುತ ಪ್ರಧಾನಿಯಲ್ಲಿ ಕಾಣೆಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ವಾಜಪೇಯಿ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದರೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿದೇಶದಲ್ಲಿ ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ಮಾಡಿದ ಹಾಗೂ ಚಿಕಿತ್ಸೆ ಬಗ್ಗೆ ವಾಜಪೇಯಿಯವರು ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ