ಸುಪ್ರೀಂ ಕೋರ್ಟ್  
ದೇಶ

ಹಣ ತಡೆಹಿಡಿದ ಕೇಂದ್ರ ಸರ್ಕಾರ ವಿರುದ್ಧ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ; 2,291 ಕೋಟಿ ರೂ ಬಿಡುಗಡೆಗೆ ಮನವಿ

ತ್ರಿಭಾಷಾ ಸೂತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಇತರ ನಿಬಂಧನೆಗಳನ್ನು ಒಳಗೊಂಡಂತೆ ಪಿಎಂ ಶ್ರೀ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ಸರ್ಕಾರ ನಿರಾಕರಿಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ನವದೆಹಲಿ: ಶಾಲಾ ಶಿಕ್ಷಣಕ್ಕಾಗಿ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಾ (SS) ಯೋಜನೆಯಡಿ ರಾಜ್ಯದೊಂದಿಗೆ ಹಂಚಿಕೊಳ್ಳಲು ಬದ್ಧವಾಗಿರುವ ಹಣವನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದೆ.

ತ್ರಿಭಾಷಾ ಸೂತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಇತರ ನಿಬಂಧನೆಗಳನ್ನು ಒಳಗೊಂಡಂತೆ ಪಿಎಂ ಶ್ರೀ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ಸರ್ಕಾರ ನಿರಾಕರಿಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ತಮಿಳು ನಾಡು ಸರ್ಕಾರವು ನ್ಯಾಯಾಲಯವು ನಿಗದಿಪಡಿಸಿದ ಸಮಯದೊಳಗೆ 2,291.30 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿದೆ, 2,151.59 ಕೋಟಿ ರೂಪಾಯಿ (2024-25ಕ್ಕೆ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾಗಿತ್ತು) ಮೂಲ ಮೊತ್ತದ ಮೇಲೆ ವಾರ್ಷಿಕ ಶೇಕಡಾ 6ರ ಬಡ್ಡಿದರದಲ್ಲಿ ಭವಿಷ್ಯದ ಬಡ್ಡಿಯೊಂದಿಗೆ, ಮೇ 1, 2025 ರಿಂದ ತೀರ್ಪು ಸಾಕಾರಗೊಳ್ಳುವವರೆಗೆ ನೀಡಬೇಕಾಗಿತ್ತು.

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕಳೆದ ಶನಿವಾರ ಚೆನ್ನೈನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಾ, ಈ ವಿಷಯದ ಬಗ್ಗೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದರು. ಏಪ್ರಿಲ್‌ನಲ್ಲಿ ರಾಜ್ಯಪಾಲ ಆರ್.ಎನ್. ರವಿ ವಿರುದ್ಧದ ಪ್ರಕರಣದಲ್ಲಿ ಮಾಡಿದಂತೆ ಅನುಕೂಲಕರ ತೀರ್ಪು ದೊರೆಯುವ ಭರವಸೆಯನ್ನು ವ್ಯಕ್ತಪಡಿಸಿದರು.

ಮಾರ್ಚ್‌ನಲ್ಲಿ ಶಿಕ್ಷಣದ ಸಂಸದೀಯ ಸ್ಥಾಯಿ ಸಮಿತಿಯು ನಿಧಿಯನ್ನು ತಕ್ಷಣ ಬಿಡುಗಡೆ ಮಾಡಲು ಶಿಫಾರಸ್ಸು ಮಾಡಿದ್ದರೂ, ಕೇಂದ್ರ ಸರ್ಕಾರವು ಪಟ್ಟುಬಿಡದೆ ಉಳಿದ ಎಲ್ಲಾ ಆಯ್ಕೆಗಳನ್ನು ನೀಡಿದ್ದರೂ, ತಮಿಳುನಾಡು ಸರ್ಕಾರವು ಸಮಗ್ರ ಶಿಕ್ಷಾ ನಿಧಿಯನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Express) ಏಪ್ರಿಲ್ 13 ರಂದು ಮೊದಲು ಸುದ್ದಿ ಪ್ರಕಟಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT