ಸಾಂದರ್ಭಿಕ ಚಿತ್ರ 
ದೇಶ

Chhattisgarh: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ; ಎನ್‌ಕೌಂಟರ್‌ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧ ಹುತಾತ್ಮ

ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಸಂಜೆ ದಟ್ಟ ಅರಣ್ಯದ ಅಭುಜ್‌ಮದ್ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್ ನಂತರ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾರಾಯಣಪುರ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡುಗಳಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ಎನ್‌ಕೌಂಟರ್‌ನಿಂದ ಹಿಂದಿರುಗುತ್ತಿದ್ದ ವೇಳೆ ಬಿಜಾಪುರ ಡಿಆರ್‌ಜಿಗೆ ಸೇರಿದ ಯೋದ ರಮೇಶ್ ಹೆಮ್ಲಾ ಎಂಬುವವರು ಒತ್ತಡ-ಸಕ್ರಿಯಗೊಳಿಸಿದ ಐಇಡಿ ಮೇಲೆ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಸ್ಫೋಟ ಸಂಭವಿಸಿ, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಡಿಆರ್‌ಜಿ ಸದಸ್ಯ ಖೋಟ್ಲುರಾಮ್ ಕೊರ್ರಂ ಬಲಿಯಾಗಿದ್ದಾನೆ. ಕೊರ್ರಂ ನಾರಾಯಣಪುರದ ಓರ್ಚಾ ಪೊಲೀಸ್ ಠಾಣೆ ಪ್ರದೇಶದ ಭಟ್ಬೇಡ ಗ್ರಾಮದ ನಿವಾಸಿ.

ಗುರುವಾರ ಮಧ್ಯಾಹ್ನ 12 ಗಂಟೆಗೆ ನಾರಾಯಣಪುರದ ಪೊಲೀಸ್ ಲೈನ್ಸ್‌ನಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮಾಲಾರ್ಪಣೆ ಸಮಾರಂಭ ನಡೆಯಲಿದ್ದು, ನಂತರ ಅವರ ಶವಗಳನ್ನು ಅವರವರ ಊರುಗಳಿಗೆ ಕಳುಹಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ