ಸುಬ್ರಮಣಿಯನ್ ಸ್ವಾಮಿ 
ದೇಶ

ಪಾಕಿಸ್ತಾನಕ್ಕೆ ಇನ್ನಷ್ಟು ಬುದ್ಧಿ ಕಲಿಸಬೇಕಿತ್ತು: ಸುಬ್ರಮಣಿಯನ್ ಸ್ವಾಮಿ

ಆಪರೇಷನ್ ಸಿಂಧೂರ್ ತದನಂತರದ ಬೆಳವಣಿಗೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಾಕಿಸ್ತಾನ ಪಹಲ್ಗಾಮ್ ಹತ್ಯಾಕಾಂಡಕ್ಕೆ ಸಂಚು ರೂಪಿಸುವ ಮೂಲಕ ಸಂಘರ್ಷವನ್ನು ಆರಂಭಿಸಿತು.

ಪಾಟ್ನಾ: 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ವೇಳೆಯಲ್ಲಿ ಪಾಕಿಸ್ತಾನಕ್ಕೆ ಇನ್ನಷ್ಟು ಬುದ್ಧಿ ಕಲಿಸಬೇಕಿತ್ತು ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಗುರುವಾರ ಹೇಳಿದ್ದಾರೆ.

ಪಾಟ್ನಾದ ಜಯಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯು ನಮ್ಮ ನಾಗರಿಕತೆಯ ಇತಿಹಾಸದಲ್ಲಿ ಅತ್ಯಂತ ಕ್ರೂರ ಘಟನೆಗಳಲ್ಲಿ ಒಂದಾಗಿದೆ ಎಂದರು.

ಆಪರೇಷನ್ ಸಿಂಧೂರ್ ತದನಂತರದ ಬೆಳವಣಿಗೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಾಕಿಸ್ತಾನ ಪಹಲ್ಗಾಮ್ ಹತ್ಯಾಕಾಂಡಕ್ಕೆ ಸಂಚು ರೂಪಿಸುವ ಮೂಲಕ ಸಂಘರ್ಷವನ್ನು ಆರಂಭಿಸಿತು. ಇದು ನಮ್ಮ ನಾಗರಿಕತೆಯ ಇತಿಹಾಸದಲ್ಲಿ ಅತ್ಯಂತ ಕ್ರೂರ ಘಟನೆಯಾಗಿದೆ. ಹಾಗಾಗಿ, ಪಾಕಿಸ್ತಾನಕ್ಕೆ ಇನ್ನಷ್ಟು ಬುದ್ಧಿ ಕಲಿಸಬೇಕಿತ್ತು ಎಂದು ಹೇಳಿದರು.

ಗಡಿಯಾಚೆಗಿನ ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ವಿವರಿಸಲು ವಿವಿಧ ದೇಶಗಳಿಗೆ ತೆರಳುತ್ತಿರುವ ಸರ್ವ ಪಕ್ಷ ನಿಯೋಗ ಕುರಿತ ಪ್ರಶ್ನೆಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ಈ ನಿಯೋಗಗಳು ಯಾವುದೇ ಪರಿಣಾಮ ಬೀರುವುದಿಲ್ಲ. ಸದಸ್ಯರು ಸರ್ಕಾರಿ ಹಣದಲ್ಲಿ ಎಂಜಾಯ್ ಮಾಡಲಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT