ಪುರಿ ಜಗನ್ನಾಥ ದೇವಾಲಯ online desk
ದೇಶ

ಪುರಿ ದೇವಾಲಯಕ್ಕೆ ಭದ್ರತೆ ಹೆಚ್ಚಳ: ಡ್ರೋನ್ ನಿಗ್ರಹ ವ್ಯವಸ್ಥೆ ಸ್ಥಾಪಿಸಲು ಒಡಿಶಾ ಯೋಜನೆ

"ರಕ್ಷಣಾ ಸಂಸ್ಥೆಗಳು ಮಾಡಿದಂತೆ ಪುರಿ ದೇವಾಲಯದ ಹೆಚ್ಚುವರಿ ಭದ್ರತೆಗಾಗಿ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಸ್ಥಾಪಿಸುವ ಕಲ್ಪನೆಯನ್ನು ನಾವು ಪರಿಗಣಿಸುತ್ತಿದ್ದೇವೆ" ಎಂದು ಹರಿಚಂದನ್ ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಭುವನೇಶ್ವರ್: ಪುರಿಯ ಜಗನ್ನಾಥ ದೇವಾಲಯದಲ್ಲಿ ಭದ್ರತೆಯನ್ನು ಹೆಚ್ಚಿಸಲು ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಒಡಿಶಾ ಸರ್ಕಾರ ತಿಳಿಸಿದೆ.

ಅನಧಿಕೃತ ಅಥವಾ ಸಂಭಾವ್ಯ ದುರುದ್ದೇಶಪೂರಿತ ಡ್ರೋನ್‌ಗಳನ್ನು ಪತ್ತೆಹಚ್ಚಲು, ಟ್ರ್ಯಾಕ್ ಮಾಡಲು ಮತ್ತು ತಟಸ್ಥಗೊಳಿಸಲು ಈ ವ್ಯವಸ್ಥೆಯು ಸಹಾಯ ಮಾಡುತ್ತದೆ ಎಂದು ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಹೇಳಿದ್ದಾರೆ.

"ರಕ್ಷಣಾ ಸಂಸ್ಥೆಗಳು ಮಾಡಿದಂತೆ ಪುರಿ ದೇವಾಲಯದ ಹೆಚ್ಚುವರಿ ಭದ್ರತೆಗಾಗಿ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಸ್ಥಾಪಿಸುವ ಕಲ್ಪನೆಯನ್ನು ನಾವು ಪರಿಗಣಿಸುತ್ತಿದ್ದೇವೆ" ಎಂದು ಹರಿಚಂದನ್ ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಸ್ತಾವಿತ ಡ್ರೋನ್ ನಿಗ್ರಹ ಉಪಕರಣಕ್ಕೆ ಹಣವನ್ನು ದೇವಾಲಯ ಆಡಳಿತವು ವ್ಯವಸ್ಥೆ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

12 ನೇ ಶತಮಾನದ ದೇವಾಲಯದ ಚಿತ್ರಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳಲು ಕೆಲವು ಯೂಟ್ಯೂಬರ್‌ಗಳು ಮತ್ತು ವ್ಲಾಗರ್‌ಗಳು ಡ್ರೋನ್‌ಗಳನ್ನು ಬಳಸುತ್ತಿದ್ದಾರೆ ಎಂದು ವರದಿಯಾದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಹೊಸ ವ್ಯವಸ್ಥೆಯನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

2024 ರಲ್ಲಿ ಪುರಿಗೆ ಭೇಟಿ ನೀಡಿದ್ದಾಗ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಿಸಿದ ಆರೋಪದ ಮೇಲೆ ಬಂಧಿಸಲಾದ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ವಿರುದ್ಧದ ಆರೋಪಗಳನ್ನು ಪುರಿ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಒಡಿಶಾ ಸರ್ಕಾರ ಪುರಿ ಮತ್ತು ಐತಿಹಾಸಿಕ ದೇವಾಲಯದ ಸುತ್ತಲೂ ಈಗಾಗಲೇ ಭದ್ರತೆಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT