ಪ್ರಧಾನಿ ಮೋದಿ  
ದೇಶ

ಭಯೋತ್ಪಾದನೆಯಾಗಲಿ ಅಥವಾ ನಕ್ಸಲಿಸಂ ಆಗಿರಲಿ, ನಮ್ಮದು ಶೂನ್ಯ ಸಹಿಷ್ಣುತೆ: ಪ್ರಧಾನಿ ಮೋದಿ

'ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಸಮ್ಮಿತ್ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಒಂದು ಕಾಲದಲ್ಲಿ ಹಿಂಸಾಚಾರದಿಂದ ಬಳಲುತ್ತಿದ್ದ ಈ ಪ್ರದೇಶವು ಈಗ ಪರಿವರ್ತನೆ ಮತ್ತು ತ್ವರಿತ ಅಭಿವೃದ್ಧಿಯ ಹಾದಿಯಲ್ಲಿದೆ ಎಂದು ಹೇಳಿದರು.

ನವದೆಹಲಿ: ಭಯೋತ್ಪಾದನೆ ಮತ್ತು ನಕ್ಸಲ್‌ವಾದದ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಗೆ ತಮ್ಮ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ, ಈಶಾನ್ಯ ಭಾರತ ರಾಜ್ಯಗಳ ಸಂಪೂರ್ಣ ಸಾಮರ್ಥ್ಯವನ್ನು ತೋರಿಸಲು ಶಾಂತಿ ಮತ್ತು ಭದ್ರತೆ ಅತ್ಯಗತ್ಯ ಎಂದು ಒತ್ತಿ ಹೇಳಿದರು.

'ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಸಮ್ಮಿತ್ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಒಂದು ಕಾಲದಲ್ಲಿ ಹಿಂಸಾಚಾರದಿಂದ ಬಳಲುತ್ತಿದ್ದ ಈ ಪ್ರದೇಶವು ಈಗ ಪರಿವರ್ತನೆ ಮತ್ತು ತ್ವರಿತ ಅಭಿವೃದ್ಧಿಯ ಹಾದಿಯಲ್ಲಿದೆ ಎಂದು ಹೇಳಿದರು.

ಕಳೆದೊಂದು ದಶಕದಲ್ಲಿ ಈಶಾನ್ಯ ಭಾಗದ 10,000 ಕ್ಕೂ ಹೆಚ್ಚು ಯುವಕರು ಹಿಂಸಾಚಾರವನ್ನು ತ್ಯಜಿಸಿದ್ದಾರೆ ಎಂದು ಅವರು ಹೇಳಿದರು, ಇದು ಬದಲಾವಣೆ ಮತ್ತು ಸ್ಥಿರತೆಯ ಪ್ರಬಲ ಸಂಕೇತವಾಗಿದೆ ಎಂದು ಶ್ಲಾಘಿಸಿದರು.

ಈಶಾನ್ಯ ಭಾರತ ದೇಶದ ಬೆಳವಣಿಗೆಯ ಹೊಸ ಕೇಂದ್ರಬಿಂದು. ಈಶಾನ್ಯ ಭಾಗವನ್ನು ಕೇವಲ ಗಡಿಭಾಗ ಎಂದು ಕರೆಯುತ್ತಿದ್ದ ಕಾಲವಿತ್ತು. ಈಗ ಅದು ಬೆಳವಣಿಗೆಯ ಮುಂಚೂಣಿಯಲ್ಲಿದೆ ಎಂದರು.

EAST ಎಂದರೆ ಸಬಲೀಕರಣ, ಕಾರ್ಯ, ಬಲವರ್ಧನೆ ಮತ್ತು ಪರಿವರ್ತನೆ, ಇದು ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರೀಕೃತ ಕಾರ್ಯಸೂಚಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂದಿನ ಶೃಂಗಸಭೆಯಲ್ಲಿ ಉನ್ನತ ಮಟ್ಟದ ಉದ್ಯಮ ನಾಯಕರಾದ ಮುಖೇಶ್ ಅಂಬಾನಿ, ಗೌತಮ್ ಅದಾನಿ, ಅನಿಲ್ ಅಗರ್ವಾಲ್ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!