ಸಹದೇವ್‌ಸಿನ್ಹ್ ದೀಪುಭಾ ಗೋಹಿಲ್ 
ದೇಶ

ಪಾಕ್ ಪರ ಬೇಹುಗಾರಿಕೆ: ಗುಜರಾತ್ ಆರೋಗ್ಯ ಕಾರ್ಯಕರ್ತನ ಬಂಧನ

ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್‌ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು, ರಾಷ್ಟ್ರೀಯ ಭದ್ರತಾ ಸಂಸ್ಥೆಗಳನ್ನು ಆತಂಕಕ್ಕೀಡು ಮಾಡಿದೆ.

ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆ(ಎಟಿಎಸ್), ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಸೂಕ್ಷ್ಮ ಗಡಿ ಜಿಲ್ಲೆಯಾದ ಕಚ್‌ನ 28 ವರ್ಷದ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಿದೆ.

ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್‌ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು, ರಾಷ್ಟ್ರೀಯ ಭದ್ರತಾ ಸಂಸ್ಥೆಗಳನ್ನು ಆತಂಕಕ್ಕೀಡು ಮಾಡಿದೆ.

ಬಂಧಿತ ಆರೋಪಿಯನ್ನು ಮಾತಾ-ನಾ-ಮಧ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿಯೋಜಿಸಲಾಗಿದ್ದ ಬಹುಪಯೋಗಿ ಆರೋಗ್ಯ ಕಾರ್ಯಕರ್ತ ಸಹದೇವ್‌ಸಿನ್ಹ್ ದೀಪುಭಾ ಗೋಹಿಲ್ ಎಂದು ಗುರುತಿಸಲಾಗಿದೆ.

ಆರೋಪಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಭಾರತೀಯ ನೌಕಾಪಡೆಗೆ ಸಂಬಂಧಿಸಿದ ವರ್ಗೀಕೃತ ಫೋಟೋಗಳು ಮತ್ತು ವಿಡಿಯೋಗಳನ್ನು ಪಾಕಿಸ್ತಾನಿ ಗುಪ್ತಚರ ಏಜೆಂಟ್ ಬಳಸುವ "ಅದಿತಿ ಭಾರದ್ವಾಜ್" ಎಂದು ಮಾತ್ರ ಗುರುತಿಸಲ್ಪಟ್ಟ ಹ್ಯಾಂಡ್ಲರ್‌ಗೆ ರವಾನಿಸಿದ್ದಾರೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಎಟಿಎಸ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಗೋಹಿಲ್ ಜೂನ್ ಅಥವಾ ಜುಲೈ 2023ರಲ್ಲಿ ವಾಟ್ಸಾಪ್ ಮೂಲಕ "ಅದಿತಿ ಭಾರದ್ವಾಜ್" ಅವರ ಸಂಪರ್ಕಕ್ಕೆ ಬಂದಿದ್ದು, ನಂತರ ಅವರನ್ನು ವ್ಯವಸ್ಥಿತವಾಗಿ ಕಛ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಮತ್ತು ಇತ್ತೀಚೆಗೆ ಪೂರ್ಣಗೊಂಡ ಮಿಲಿಟರಿ ಸೌಲಭ್ಯಗಳ ಚಿತ್ರಗಳು ಸೇರಿದಂತೆ ಸೂಕ್ಷ್ಮ ವಿಷಯಗಳನ್ನು ಸೋರಿಕೆ ಮಾಡಲು ತರಬೇತಿ ನೀಡಲಾಗಿದೆ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT