ಹರ್ಜಿಂದರ್ ಸಿಂಗ್ 
ದೇಶ

ಅಮೃತಸರದಲ್ಲಿ ಅಕಾಲಿ ದಳದ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ

ಹತ್ಯೆಯಾದ ವ್ಯಕ್ತಿಯನ್ನು ಹರ್ಜಿಂದರ್ ಸಿಂಗ್ ಜಂಡಿಯಾಲ ಎಂದು ಗುರುತಿಸಲಾಗಿದ್ದು, ಅವರು ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 2ರ ಕೌನ್ಸಿಲರ್ ಆಗಿದ್ದರು.

ಅಮೃತಸರ: ಅಮೃತಸರದ ಚೆಹೆರ್ತಾ ಪ್ರದೇಶದಲ್ಲಿ ಭಾನುವಾರ ಶಿರೋಮಣಿ ಅಕಾಲಿ ದಳದ ಕೌನ್ಸಿಲರ್ ಒಬ್ಬರನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಹರ್ಜಿಂದರ್ ಸಿಂಗ್ ಜಂಡಿಯಾಲ ಎಂದು ಗುರುತಿಸಲಾಗಿದ್ದು, ಅವರು ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 2ರ ಕೌನ್ಸಿಲರ್ ಆಗಿದ್ದರು.

ಬೈಕ್‌ನಲ್ಲಿ ಬಂದ ಮೂರರಿಂದ ನಾಲ್ಕು ಅಪರಿಚಿತ ವ್ಯಕ್ತಿಗಳು ಕೌನ್ಸಿಲರ್ ಅವರನ್ನು ಅಡ್ಡಗಟ್ಟಲು ಪ್ರಯತ್ನಿಸಿದರು ಮತ್ತು ಅವರ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದರು ಎಂದು ಎಡಿಸಿಪಿ ಹರ್ಪಾಲ್ ಸಿಂಗ್ ರಾಂಧವಾ ಹೇಳಿದ್ದಾರೆ.

ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಂಗ್ ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೌನ್ಸಿಲರ್‌ಗೆ ಬೆದರಿಕೆ ಕರೆಗಳು ಬರುತ್ತಿದ್ದವು ಮತ್ತು ಆ ಬಗ್ಗೆ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಕಾಲಿ ದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ "ದಯನೀಯ"ವಾಗಿದೆ ಎಂದು ಬಿಕ್ರಮ್ ಸಿಂಗ್ ಅವರು ಪಂಜಾಬ್‌ನ ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT