NDA ಸಭೆ 
ದೇಶ

NDA ಸಭೆಯಲ್ಲಿ ಪ್ರಧಾನಿ ಮೋದಿ ನಾಯಕತ್ವ ಶ್ಲಾಘಿಸುವ ನಿರ್ಣಯ ಅಂಗೀಕಾರ

ನಿರ್ಣಯ ಪ್ರಸ್ತಾಪಿಸಿದ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆಪರೇಷನ್ ಸಿಂಧೂರ್ ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯಲ್ಲಿ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಧೈರ್ಯಶಾಲಿ ನಾಯಕತ್ವವನ್ನು ಶ್ಲಾಘಿಸುವ ನಿರ್ಣಯ ಅಂಗೀಕರಿಸಲಾಯಿತು.

ನಿರ್ಣಯ ಪ್ರಸ್ತಾಪಿಸಿದ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆಪರೇಷನ್ ಸಿಂಧೂರ್ ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಾ, ಪ್ರಧಾನಿ ಯಾವಾಗಲೂ ಸಶಸ್ತ್ರ ಪಡೆಗಳನ್ನು ಬೆಂಬಲಿಸಿದ್ದಾರೆ ಮತ್ತು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುತ್ತಿದ್ದವರಿಗೆ ತಕ್ಕ ಉತ್ತರ ನೀಡಿದೆ ಎಂದು ಎನ್ ಡಿಎ ನಾಯಕರು ಹೇಳಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಜೆ ಪಿ ನಡ್ಡಾ ಸಹ ಎನ್ ಡಿಎನ ಒಂದು ದಿನದ ಸಮಾವೇಶದಲ್ಲಿ ಭಾಗವಹಿಸಿದ್ದರು. ಅಲ್ಲದೆ ಸುಮಾರು 19 ಮುಖ್ಯಮಂತ್ರಿಗಳು ಮತ್ತು ಅನೇಕ ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ವಾರ್ಷಿಕೋತ್ಸವ, ಜಾತಿ ಗಣತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT