ಕಾಂಗ್ರೆಸ್ ನಾಯಕ ಶಶಿ ತರೂರ್ online desk
ದೇಶ

ಟರ್ಕಿಗೆ ನೆರವು: ಮಿತಿ ಮೀರಿದ ಔದಾರ್ಯದ ಬಗ್ಗೆ ಕೇರಳ ಸರ್ಕಾರ ಗಂಭೀರವಾಗಿ ಚಿಂತಿಸಲಿ- ಶಶಿ ತರೂರ್

ಟರ್ಕಿಗೆ ಕೇರಳದ 10 ಕೋಟಿ ರೂ. ನೆರವಿನ ಬಗ್ಗೆ ಸುದ್ದಿಯನ್ನು X ನಲ್ಲಿ ಪೋಸ್ಟ್ ಮಾಡಿದ ತರೂರ್, ಎಡ ಪ್ರಜಾಸತ್ತಾತ್ಮಕ ರಂಗ (LDF) ನೇತೃತ್ವದ ಸರ್ಕಾರ "ತನ್ನ ತಪ್ಪಾದ ಔದಾರ್ಯದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ" ಎಂದು ಹೇಳಿದ್ದಾರೆ.

ನವದೆಹಲಿ: ಆಪರೇಷನ್ ಸಿಂಧೂರ್ ಕುರಿತು ಕೇಂದ್ರದ ಅಂತರರಾಷ್ಟ್ರೀಯ ಸಂಪರ್ಕದ ಭಾಗವಾಗಿರುವ ಕಾಂಗ್ರೆಸ್‌ನ ಶಶಿ ತರೂರ್, 2023 ರ ಭೂಕಂಪದ ಸಮಯದಲ್ಲಿ ಟರ್ಕಿಗೆ ಸಹಾಯ ಮಾಡಿದ್ದಕ್ಕಾಗಿ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತದ ವಿರುದ್ಧದ ಬಿಕ್ಕಟ್ಟಿನಲ್ಲಿ ಪಾಕಿಸ್ತಾನಕ್ಕೆ ಟರ್ಕಿ ನೀಡಿದ ಬೆಂಬಲವನ್ನು ತರೂರ್ ಉಲ್ಲೇಖಿಸಿದ್ದಾರೆ.

X ನಲ್ಲಿ ಟರ್ಕಿಗೆ ಕೇರಳದ 10 ಕೋಟಿ ರೂ. ನೆರವಿನ ಬಗ್ಗೆ ಸುದ್ದಿಯನ್ನು ಪೋಸ್ಟ್ ಮಾಡಿದ ತರೂರ್, ಎಡ ಪ್ರಜಾಸತ್ತಾತ್ಮಕ ರಂಗ (LDF) ನೇತೃತ್ವದ ಸರ್ಕಾರ "ತನ್ನ ತಪ್ಪಾದ ಔದಾರ್ಯದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ" ಎಂದು ಹೇಳಿದ್ದಾರೆ.

"ಭಾರತದಿಂದ ನೆರವು ಪಡೆದ ಎರಡು ವರ್ಷಗಳ ನಂತರ ಟರ್ಕಿಯ ನಡವಳಿಕೆಯನ್ನು ನೋಡಿದ ನಂತರ, ಕೇರಳ ಸರ್ಕಾರ ತನ್ನ ತಪ್ಪಾದ ಔದಾರ್ಯದ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ನಾನು ಭಾವಿಸುತ್ತೇನೆ! ವಯನಾಡಿನ ಜನರು (ಕೇರಳದ ಒಂದು ಉದಾಹರಣೆಯನ್ನು ತೆಗೆದುಕೊಳ್ಳುವುದಾದರೆ) ಆ ಹತ್ತು ಕೋಟಿಗಳನ್ನು ಇನ್ನೂ ಉತ್ತಮವಾಗಿ ಬಳಸಬಹುದಿತ್ತು" ಎಂದು ಅವರ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸಿಪಿಎಂನ ಜಾನ್ ಬ್ರಿಟಾಸ್ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ಟರ್ಕಿಗೆ ಸಹಾಯಹಸ್ತ ಚಾಚಿ ಅದನ್ನು ಶಶಿ ತರೂರ್ ಪ್ರಶ್ನಿಸುತ್ತಿಲ್ಲ ಇದು ಕೇವಲ "ಜಾಣ ಮರೆವು" ಎಂದು ಹೇಳಿದ್ದಾರೆ. "ಶಶಿ ತರೂರ್‌ಗೆ ತುಂಬಾ ಧನ್ಯವಾದಗಳು. ಆದರೆ ಈ ಹೇಳಿಕೆ ಜಾಣ ಮರೆವಿನ ಲಕ್ಷಣಗಳಾಗಿವೆ" ಎಂದು ಸಿಪಿಎಂ ನಾಯಕ ತಮ್ಮ ಜಾಲತಾಣ ಪೋಸ್ಟ್‌ನಲ್ಲಿ ಬರೆದಿದ್ದಾರೆ.

"ಟರ್ಕಿಗೆ ಸಹಾಯ ಮಾಡಲು ಮೋದಿ ಸರ್ಕಾರವೇ ಆಪರೇಷನ್ ದೋಸ್ತ್ ನ್ನು ಪ್ರಾರಂಭಿಸಿತ್ತು ಎಂದು ಚೆನ್ನಾಗಿ ತಿಳಿದಿದ್ದರೂ ಅವರು ಕೇರಳವನ್ನು ಏಕೆ ಟೀಕಿಸುತ್ತಿದ್ದಾರೆ ಎಂಬುದು ಅಷ್ಟೇ ತಮಾಷೆ ಮತ್ತು ಗೊಂದಲಮಯವಾಗಿದೆ. ಕೇರಳದ ಮೇಲಿನ ದಾಳಿ ಅನಗತ್ಯ" ಎಂದು ಬರೆದಿದ್ದಾರೆ.

ಭಾರತದೊಂದಿಗಿನ ನಾಲ್ಕು ದಿನಗಳ ಸಶಸ್ತ್ರ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಟರ್ಕಿ ನೀಡಿದ ಸಹಾಯದ ನಂತರ ಮೆಡಿಟರೇನಿಯನ್ ರಾಷ್ಟ್ರದ ವಿರುದ್ಧ ಸಾರ್ವಜನಿಕ ಭಾವನೆ ತೀವ್ರಗೊಂಡಿದೆ. ನಾಗರಿಕ ಸಮಾಜ ಟರ್ಕಿಯನ್ನು ಪ್ರವಾಸಿ ತಾಣಗಳ ಪಟ್ಟಿಯಿಂದ ಕೈಬಿಟ್ಟಿದೆ. ವ್ಯಾಪಾರಿ ಸಂಘಗಳು ಟರ್ಕಿಶ್ ಸರಕುಗಳನ್ನು ಬಹಿಷ್ಕರಿಸಿವೆ ಮತ್ತು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಟರ್ಕಿಶ್ ಸಂಸ್ಥೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT