ಒಂದೇ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಕಾರು  
ದೇಶ

ಹರ್ಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ: ಪಾರ್ಕ್ ಮಾಡಿದ್ದ ಕಾರಿನಲ್ಲಿ ಶವ ಪತ್ತೆ

ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು.

ಪಂಚಕುಲ(ಡೆಹ್ರಾಡೂನ್): ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್ ಮೂಲದ ಆರು ಮಂದಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು ಲಾಕ್ ಆಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಮೂಲಗಳ ಪ್ರಕಾರ, ಕುಟುಂಬ ಸದಸ್ಯರು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಈ ಕಠಿಣ ಕ್ರಮ ಕೈಗೊಂಡಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗಿದ ನಂತರ ಕಳೆದ ಭಾನುವಾರ ಈ ಘಟನೆ ನಡೆದಿದೆ.

ಕಾರಿನೊಳಗೆ ಕುಟುಂಬ ಸದಸ್ಯರು ಹೆಣಗಾಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸುತ್ತಿದ್ದಂತೆಯೇ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಪ್ರವೀಣ್ ಮಿತ್ತಲ್ (42ವ), ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳೆಂದು ಗುರುತಿಸಲಾಗಿದೆ. ಆರಂಭಿಕ ತನಿಖೆಯ ನಂತರ, ಇದು ಆತ್ಮಹತ್ಯೆ ಪ್ರಕರಣದಂತೆ ತೋರುತ್ತಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಶ್ಲೇಷಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.

ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT