ಡ್ರೋನ್ ಸಾಂದರ್ಭಿಕ ಚಿತ್ರ 
ದೇಶ

ಭಾರತ-ನೇಪಾಳ ಗಡಿಯಲ್ಲಿ 15 ರಿಂದ 20 ಡ್ರೋನ್‌ 40 ನಿಮಿಷ ಹಾರಾಟ: ಬಿಹಾರದಲ್ಲಿ ಹೈ ಅಲರ್ಟ್!

SSB ಅಧಿಕಾರಿಗಳು ತಕ್ಷಣವೇ ಈ ಮಾಹಿತಿಯ್ನು ದರ್ಭಾಂಗಾ ಮತ್ತು ದೆಹಲಿ ವಾಯುಪಡೆ ಅಧಿಕಾರಿಗಳಿಗೆ ತಲುಪಿಸಿದ್ದು, ತದನಂತರ ಅಂತರಾಷ್ಟ್ರೀಯ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.

ಪಾಟ್ನಾ: ಭಾರತ-ನೇಪಾಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ 15 ರಿಂದ 20 ಡ್ರೋನ್‌ಗಳು ಹಾರಾಟ ನಡೆಸಿದ್ದು, ಬಿಹಾರ ಪೊಲೀಸರು ಮಂಗಳವಾರ ಹೈ ಅಲರ್ಟ್ ಘೋಷಿಸಿದ್ದಾರೆ.

ಹೌದು. ಸೋಮವಾರ ರಾತ್ರಿ ಸುಮಾರು 15 ರಿಂದ 20 ಡ್ರೋನ್‌ಗಳು ನೇಪಾಳದಿಂದ ಭಾರತೀಯ ವಾಯುಪ್ರದೇಶ ಪ್ರವೇಶಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.

ಮಧುಬನಿ ಜಿಲ್ಲೆಯ ಕಮಲಾ ಬಾರ್ಡರ್ ಔಟ್‌ಪೋಸ್ಟ್ ನಲ್ಲಿ ಸುಮಾರು 40 ನಿಮಿಷಗಳ ಕಾಲ ಈ ಡ್ರೋನ್‌ಗಳು ಹಾರಾಟ ನಡೆಸಿದ್ದು, ತದನಂತರ ನೇಪಾಳಕ್ಕೆ ಹಿಂತಿರುಗಿವೆ.

ಸೋಮವಾರ ಸಂಜೆ 7.30 ರ ಸುಮಾರಿಗೆ ಕಮಲಾ ಗಡಿ ಪೊಲೀಸ್ ಹೊರಠಾಣೆ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ 15-20 ಡ್ರೋನ್ ತರಹದ ಸಾಧನಗಳು ಆಕಾಶದಲ್ಲಿ ಹಾರಾಟ ನಡೆಸಿರುವುದು ಕಂಡುಬಂದಿದೆ. ತದನಂತರ, ಅವುಗಳು ಭಾರತದ ವಾಯುಪ್ರದೇಶವನ್ನು ಪ್ರವೇಶಿಸಿ ಉತ್ತರ ನೇಪಾಳದ ಕಡೆಗೆ ಮರಳಿವೆ ಎಂದು ಸಶಸ್ತ್ರ ಸೀಮಾ ಬಾಲ್ (SSB)ಉಪ ಕಮಾಂಡೆಂಟ್ ವಿವೇಕ್ ಓಜಾ ಖಚಿತಪಡಿಸಿದ್ದಾರೆ.

SSB ಅಧಿಕಾರಿಗಳು ತಕ್ಷಣವೇ ಈ ಮಾಹಿತಿಯ್ನು ದರ್ಭಾಂಗಾ ಮತ್ತು ದೆಹಲಿ ವಾಯುಪಡೆ ಅಧಿಕಾರಿಗಳಿಗೆ ತಲುಪಿಸಿದ್ದು, ತದನಂತರ ಅಂತರಾಷ್ಟ್ರೀಯ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಡ್ರೋನ್ ಹಾರಾಟದ ಬಗ್ಗೆ ನೇಪಾಳದ ಭದ್ರತಾ ಅಧಿಕಾರಿಗಳೊಂದಿಗೆ ವಿಚಾರಣೆ ನಡೆಸಲಾಗಿದೆ. ಆದರೆ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಡ್ರೋನ್‌ಗಳ ನಿಖರವಾದ ಸ್ವರೂಪ ಮತ್ತು ಉದ್ದೇಶ ಕುರಿತು ತನಿಖೆ ನಡೆಯುತ್ತಿದೆ ಎಂದು ಓಜಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗಡಿ ಪ್ರದೇಶಗಳಲ್ಲಿ ತೀವ್ರ ತಪಾಸಣೆ ಕಾರ್ಯಾಚರಣೆ ಆರಂಭಿಸಲಾಗಿದೆ. ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ವಹಿಸಲಾಗಿದೆ. ಭದ್ರತಾ ಕಾರಣಗಳಿಗಾಗಿ ನೇಪಾಳದಿಂದ ಬರುವ ಜನರನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಗಲ್ಗಾಲಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಕೇಶ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT