ಶಶಿ ತರೂರ್ 
ದೇಶ

ಶಶಿ ತರೂರ್ ಬಿಜೆಪಿಯ 'ಸೂಪರ್ ವಕ್ತಾರ' ಆಗಿದ್ದಾರೆ: ಕಾಂಗ್ರೆಸ್ ಕಿಡಿ

ಪನಾಮದಲ್ಲಿ ಮಾತನಾಡಿದ ಶಶಿ ತರೂರ್ ಅವರು, 2016 ರಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ಸರ್ಜಿಕಲ್ ಸ್ಟ್ರೈಕ್ ಸಮಯದಲ್ಲಿ ಭಾರತ ಮೊದಲ ಬಾರಿಗೆ ಗಡಿ ನಿಯಂತ್ರಣ ರೇಖೆಯನ್ನು(LOC) ಉಲ್ಲಂಘಿಸಿತು ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರು ಬುಧವಾರ ತಮ್ಮ ಪಕ್ಷದ ನಾಯಕ ಶಶಿ ತರೂರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು "ಬಿಜೆಪಿಯ ಸೂಪರ್ ವಕ್ತಾರ" ಎಂದು ಘೋಷಿಸಬೇಕು ಎಂದು ಕಿಡಿ ಕಾರಿದ್ದಾರೆ.

ಐದು ದೇಶಗಳಿಗೆ ತೆರಳಿರುವ ಸರ್ವಪಕ್ಷ ನಿಯೋಗದ ನೇತೃತ್ವ ವಹಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಪನಾಮದಲ್ಲಿ ಮಾತನಾಡುತ್ತಾ, 2016 ರಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ಸರ್ಜಿಕಲ್ ಸ್ಟ್ರೈಕ್ ಸಮಯದಲ್ಲಿ ಭಾರತ ಮೊದಲ ಬಾರಿಗೆ ಗಡಿ ನಿಯಂತ್ರಣ ರೇಖೆಯನ್ನು(LOC) ಉಲ್ಲಂಘಿಸಿತು ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

ತರೂರ್ ಅವರ ಹೇಳಿಕೆಯನ್ನು ಟ್ಯಾಗ್ ಮಾಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಉದಿತ್ ರಾಜ್ ಅವರು, "ನನ್ನ ಪ್ರೀತಿಯ ಶಶಿ ತರೂರ್, ಅಯ್ಯೋ! ಭಾರತಕ್ಕೆ ಇಳಿಯುವ ಮೊದಲು ನಿಮ್ಮನ್ನು ವಿದೇಶಾಂಗ ಸಚಿವ ಎಂದು ಘೋಷಿಸಲು ನಾನು ಪ್ರಧಾನಿ ಮೋದಿಯವರ ಮನವೊಲಿಸಬಲ್ಲೆ. ಆದರೆ ಪ್ರಧಾನಿ ಮೋದಿಗಿಂತ ಮೊದಲು, ಭಾರತ ಎಂದಿಗೂ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯನ್ನು ದಾಟಿಲ್ಲ ಎಂದು ಹೇಳುವ ಮೂಲಕ ನೀವು ಕಾಂಗ್ರೆಸ್‌ನ ಸುವರ್ಣ ಇತಿಹಾಸವನ್ನು ಅವಮಾನಿಸಿದ್ದೀರಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"1965 ರಲ್ಲಿ ಭಾರತೀಯ ಸೇನೆಯು ಪಾಕಿಸ್ತಾನವನ್ನು ಹಲವು ಹಂತಗಳಲ್ಲಿ ಪ್ರವೇಶಿಸಿತು. ಇದು ಲಾಹೋರ್ ವಲಯದಲ್ಲಿ ಪಾಕಿಸ್ತಾನಿಗಳನ್ನು ಸಂಪೂರ್ಣವಾಗಿ ಅಚ್ಚರಿಗೊಳಿಸಿತು. 1971 ರಲ್ಲಿ, ಭಾರತ ಪಾಕಿಸ್ತಾನವನ್ನು ಎರಡು ತುಂಡುಗಳಾಗಿ ಹರಿದು ಹಾಕಿತು ಮತ್ತು ಯುಪಿಎ ಸರ್ಕಾರದ ಅವಧಿಯಲ್ಲಿ ಹಲವಾರು ಸರ್ಜಿಕಲ್ ಸ್ಟ್ರೈಕ್‌ಗಳನ್ನು ಮಾಡಲಾಯಿತು. ಆದರೆ ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಡ್ರಮ್ ಬಾರಿಸುವ ಕೆಲಸ ಮಾಡಿಲ್ಲ" ಎಂದು ಅವರು ಹೇಳಿದ್ದಾರೆ.

X ನಲ್ಲಿ ಉದಿತ್ ರಾಜ್ ಅವರ ಪೋಸ್ಟ್ ಅನ್ನು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮರು ಪೋಸ್ಟ್ ಮಾಡಿದ್ದಾರೆ.

ಪಹಲ್ಗಾಮ್‌ ಉಗ್ರ ದಾಳಿ ಮತ್ತು ಉಗ್ರವಾದಕ್ಕೆ ಪಾಕಿಸ್ತಾನದ ಬೆಂಬಲದ ಸತ್ಯಾಸತ್ಯತೆಯನ್ನು ಜಗತ್ತಿಗೆ ಮನವರಿಕೆ ಮಾಡಲು, ಭಾರತದ ಸರ್ವಪಕ್ಷ ಸಂಸದೀಯ ನಿಯೋಗ ವಿವಿಧ ದೇಶಗಳಿಗೆ ಭೇಟಿ ನೀಡಿದೆ. ಅದರಂತೆ ಸದ್ಯ ಲ್ಯಾಟಿನ್‌ ಅಮೆರಿಕ ರಾಷ್ಟ್ರವಾದ ಪನಾಮಾದಲ್ಲಿರುವ ಶಶಿ ತರೂರ್‌ ಸದಸ್ಯರಾಗಿರುವ ನಿಯೋಗವು, ಭಾರತವು ದಶಕಗಳಿಂದ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ದಿಟ್ಟವಾಗಿ ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ನಾವು ಸುಮಾರು ನಾಲ್ಕು ದಶಕಗಳಿಂದ ದಾಳಿಯ ಮೇಲೆ ದಾಳಿಯನ್ನು ಅನುಭವಿಸಿದ್ದೇವೆ. ನೋವು, ದುಃಖ, ಗಾಯಗಳು, ನಷ್ಟಗಳನ್ನು ಸಹಿಸಿಕೊಳ್ಳುವುದನ್ನು ಮುಂದುವರಿಸುವುದು ಮತ್ತು ನಂತರ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಹೋಗಿ ಅಳಲು ತೋಡಿಕೊಳ್ಳುವುದನ್ನು ಭಾರತ ಈಗ ನಿಲ್ಲಿಸಿದೆ. ಭಾರತ ವಿರೋಧಿ ಭಯೋತ್ಪಾದಕ ಕೃತ್ಯಗಳಿಗೆ ಈಗೇನಿದ್ದರೂ ಸೇನಾ ಕಾರ್ಯಚರಣೆಗಳೇ ನಮ್ಮ ಉತ್ತರವಾಗಿರುತ್ತವೆ" ಎಂದು ಶಶಿ ತರೂರ್‌ "ಆಪರೇಷನ್‌ ಸಿಂಧೂರ"ಮಿಲಿಟರಿ ಕಾರ್ಯಾಚರಣೆಯನ್ನು ಉಲ್ಲೇಖಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT