ಕಮಲ್ ಹಾಸನ್-ಎಂ ಕೆ ಸ್ಟಾಲಿನ್  
ದೇಶ

Kamal Hassan ರಾಜ್ಯಸಭೆ ಪ್ರವೇಶ ಅಧಿಕೃತ: ಡಿಎಂಕೆ ಸಂಸದೆಯಾಗಿ ಕವಯಿತ್ರಿ ಸಲ್ಮಾ ಕೂಡ ಮೇಲ್ಮನೆಗೆ

2024 ರ ಲೋಕಸಭಾ ಚುನಾವಣೆ ಮೈತ್ರಿಕೂಟದ ಸಮಯದಲ್ಲಿ ಮಾಡಿದ ಬದ್ಧತೆಯನ್ನು ಪೂರೈಸುವ ಮೂಲಕ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮೈಯಂಗೆ ಒಂದು ಸ್ಥಾನವನ್ನು ಪಕ್ಷ ನೀಡಿದೆ.

ಚೆನ್ನೈ: ಮೊನ್ನೆ ಚೆನ್ನೈಯಲ್ಲಿ ಥಗ್ ಲೈಫ್ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಬಗ್ಗೆ ಹೇಳಿಕೆ ನೀಡಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ಖ್ಯಾತ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಾಮ್ ಪಕ್ಷಕ್ಕೆ ಒಂದು ರಾಜ್ಯಸಭೆ ಟಿಕೆಟ್ ಸಿಕ್ಕಿದೆ.

ದ್ರಾವಿಡ ಮುನ್ನೇತ್ರ ಕಳಗಂ (DMK) ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೇಲ್ಮನೆಯಲ್ಲಿ ತನ್ನ ಹಾಲಿ ಸದಸ್ಯ ಹಿರಿಯ ವಕೀಲ ಪಿ ವಿಲ್ಸನ್ ಅವರನ್ನು ಮರು ನಾಮನಿರ್ದೇಶನ ಮಾಡಿದ್ದು, ಇತರ ಇಬ್ಬರಾದ ಸೇಲಂ ಮೂಲದ ಪಕ್ಷದ ನಾಯಕ ಎಸ್.ಆರ್. ಶಿವಲಿಂಗಂ ಮತ್ತು ಕವಿ, ಬರಹಗಾರ ಮತ್ತು ಪಕ್ಷದ ಪದಾಧಿಕಾರಿ ರುಕಯ್ಯ ಮಲಿಕ್ ಅಲಿಯಾಸ್ ಕವಿಗ್ನರ್ ಸಲ್ಮಾ ಅವರನ್ನು ಹೆಸರಿಸಿದೆ.

2024 ರ ಲೋಕಸಭಾ ಚುನಾವಣೆ ಮೈತ್ರಿಕೂಟದ ಸಮಯದಲ್ಲಿ ಮಾಡಿದ ಬದ್ಧತೆಯನ್ನು ಪೂರೈಸುವ ಮೂಲಕ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮೈಯಂಗೆ ಒಂದು ಸ್ಥಾನವನ್ನು ಪಕ್ಷ ನೀಡಿದೆ. ಈ ಮೂಲಕ ನಟ ಹಾಗೂ ರಾಜಕಾರಣಿಯಾಗಿರುವ ಕಮಲ್ ಹಾಸನ್ ಅವರು ರಾಜ್ಯಸಭೆ ಪ್ರವೇಶಿಸುವ ನಿರೀಕ್ಷೆಯಿದೆ.

ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ, ಕಮಲ್ ಹಾಸನ್ ಅವರು ಲೋಕಸಭೆ ಚುನಾವಣೆಗೆ ಮೊದಲು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಶೀಲ ಒಕ್ಕೂಟ (SPA)ವನ್ನು ಸೇರಿದ್ದರು, ಚುನಾವಣೆಯಲ್ಲಿ ಸ್ಪರ್ಧಿಸದೆ ಬೆಂಬಲವನ್ನು ಘೋಷಿಸಿದ್ದರು. ಪ್ರತಿಯಾಗಿ, ಡಿಎಂಕೆ ಎಂಎನ್‌ಎಂಗೆ ರಾಜ್ಯಸಭಾ ಸ್ಥಾನವನ್ನು ನೀಡುವ ಭರವಸೆ ನೀಡಿತ್ತು, ಆ ಭರವಸೆಯನ್ನು ಈಗ ಪೂರೈಸಿದೆ.

ತಮಿಳು ನಾಡು ರಾಜ್ಯದ ಆರು ಪ್ರಸ್ತುತ ಸಂಸದರಾದ ಅನ್ಬುಮಣಿ ರಾಮದಾಸ್, ಎಂ ಷಣ್ಮುಗಂ, ಎನ್ ಚಂದ್ರಶೇಖರನ್, ಎಂ ಮೊಹಮ್ಮದ್ ಅಬ್ದುಲ್ಲಾ, ಪಿ ವಿಲ್ಸನ್ ಮತ್ತು ವೈಕೊ ಅವರ ಅವಧಿ ಜುಲೈ 25 ರಂದು ಮುಕ್ತಾಯಗೊಳ್ಳಲಿದ್ದು, ಖಾಲಿ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT