ಡಾ. ಅಜಯ್ ಟವರೆ 
ದೇಶ

ಪುಣೆ ಪೋರ್ಷೆ ಅಪಘಾತ ಪ್ರಕರಣದಲ್ಲಿ ರಕ್ತದ ಮಾದರಿ ತಿರುಚಿದ್ದ ವೈದ್ಯ ಈಗ ಕಿಡ್ನಿ ಕಸಿ ಜಾಲದಲ್ಲಿ ಬಂಧನ

"ಕಿಡ್ನಿ ಜಾಲ ಪ್ರಕರಣದಲ್ಲಿ ನಾವು ಡಾ. ಅಜಯ್ ಟವರೆ ಅವರನ್ನು ವಶಕ್ಕೆ ಪಡೆದಿದ್ದೇವೆ ಮತ್ತು ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು" ಎಂದು ಉಪ ಪೊಲೀಸ್ ಆಯುಕ್ತ(ಅಪರಾಧ) ನಿಖಿಲ್ ಪಿಂಗಲೆ ಹೇಳಿದ್ದಾರೆ.

ಪುಣೆ: ಪುಣೆಯ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಕಿಡ್ನಿ ಕಸಿ ಜಾಲಕ್ಕೆ ಸಂಬಂಧಿಸಿದಂತೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಮಾಜಿ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ. ಅಜಯ್ ಟವರೆ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆಯ ಕಲ್ಯಾಣಿ ನಗರದಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಬಾಲಕನ ರಕ್ತದ ಮಾದರಿ ತಿರುಚಿದ ಆರೋಪದ ಮೇಲೆ ಕಳೆದ ವರ್ಷ ಬಂಧನಕ್ಕೊಳಗಾಗಿದ್ದ ಟವರೆ ಅವರನ್ನು ಈಗ ಕಿಡ್ನಿ ಕಸಿ ಜಾಲದಲ್ಲಿ ಬಂಧಿಸಿದ್ದು, ಯೆರ್ವಾಡಾ ಕೇಂದ್ರ ಜೈಲಿನಲ್ಲಿದ್ದಾರೆ.

ಇಲ್ಲಿನ ಪ್ರಮುಖ ಖಾಸಗಿ ಆಸ್ಪತ್ರೆಯಾದ ರೂಬಿ ಹಾಲ್ ಕ್ಲಿನಿಕ್‌ನಲ್ಲಿ 2022 ರಲ್ಲಿ ನಡೆದ ಮೂತ್ರಪಿಂಡ ಕಸಿ ಜಾಲಕ್ಕೆ ಸಂಬಂಧಿಸಿದಂತೆ ನಗರ ಅಪರಾಧ ವಿಭಾಗವು ಟವರೆಯನ್ನು ಈಗ ವಶಕ್ಕೆ ಪಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಕಿಡ್ನಿ ಜಾಲ ಪ್ರಕರಣದಲ್ಲಿ ನಾವು ಡಾ. ಅಜಯ್ ಟವರೆ ಅವರನ್ನು ವಶಕ್ಕೆ ಪಡೆದಿದ್ದೇವೆ ಮತ್ತು ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು" ಎಂದು ಉಪ ಪೊಲೀಸ್ ಆಯುಕ್ತ(ಅಪರಾಧ) ನಿಖಿಲ್ ಪಿಂಗಲೆ ಹೇಳಿದ್ದಾರೆ.

ಡಾ. ಅಜಯ್ ಟವರೆ ಅವರು 2022 ರಲ್ಲಿ, ಮೂತ್ರಪಿಂಡ ಕಸಿ ಮಾಡಲು ಅನುಮೋದನೆ ನೀಡಿದ ಪ್ರಾದೇಶಿಕ ಅಧಿಕಾರ ಸಮಿತಿಯ ಮುಖ್ಯಸ್ಥರಾಗಿದ್ದರು.

ಆ ವರ್ಷದ ಮಾರ್ಚ್‌ನಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮೇ 2022 ರಲ್ಲಿ ರೂಬಿ ಹಾಲ್ ಕ್ಲಿನಿಕ್‌ನ ವ್ಯವಸ್ಥಾಪಕ ಟ್ರಸ್ಟಿ ಮತ್ತು ಅದರ ಕೆಲವು ಉದ್ಯೋಗಿಗಳು ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

News wrap 12-02-2026| ನಾನು ರಾಜಕಾರಣ ಮಾಡೋಕೇ ದಿಲ್ಲಿಗೆ ಬಂದಿರೋದು- ಡಿಕೆ ಶಿವಕುಮಾರ್; ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್; ರಾಹುಲ್ ಗಾಂಧಿ ಫೋಟೋ ಎಡಿಟ್: ಶಾಸಕ ಆರಗ ಜ್ಞಾನೇಂದ್ರ PA ಬಂಧನ

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಮಾರಾಟವಾಗದೇ ಉಳಿದದ್ದಾ? or ಕುಡಿದು ಉಳಿದದ್ದಾ?: ದೆಹಲಿ ಸ್ಟೇಡಿಯಂ ಸಿಬ್ಬಂದಿ ಪಾನೀಯ ತುಂಬುತ್ತಿರುವ Video Viral

SCROLL FOR NEXT