ಬಾಂಗ್ಲಾದೇಶಿ ಪ್ರಜೆಗಳ ಬಂಧನ 
ದೇಶ

ನವದೆಹಲಿ: ಮೂವರು ಮಕ್ಕಳು ಸೇರಿದಂತೆ 9 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ!

ದೂರೆತ ಖಚಿತ ಮಾಹಿತಿ ಆಧಾರದ ಮೇಲೆ ತಂಡವು ಮೇ 25 ರಂದು ನರೇಲಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದು, ಅವರು ಮಾನ್ಯವಾದ ಯಾವುದೇ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ.

ನವದೆಹಲಿ: ದೆಹಲಿ ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ನೆಲೆಸಿದ್ದ ಮೂವರು ಮಕ್ಕಳು ಸೇರಿದಂತೆ 9 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ದೂರೆತ ಖಚಿತ ಮಾಹಿತಿ ಆಧಾರದ ಮೇಲೆ ತಂಡವು ಮೇ 25 ರಂದು ನರೇಲಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದು, ಅವರು ಮಾನ್ಯವಾದ ಯಾವುದೇ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ.

ಯಾವುದೇ ಗುರುತಿನ ದಾಖಲೆಗಳಿಲ್ಲದೆ ರಸ್ತೆಬದಿಯಲ್ಲಿ ಉಳಿದುಕೊಂಡಿದ್ದ ನಾಲ್ವರು ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಾ ಬದುಕುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ನಡೆಸಿದ ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆನಂದ್ ವಿಹಾರ್ ಪ್ರದೇಶದಿಂದ ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಐವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಅನಧಿಕೃತವಾಗಿ ನದಿ ಮಾರ್ಗಗಳ ಮೂಲಕ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದು, ಯಾವುದೇ ದಾಖಲೆಗಳಿಲ್ಲದೆ ಪೂರ್ವ ದೆಹಲಿಯಲ್ಲಿ ವಾಸಿಸುತ್ತಿದ್ದರು ಎಂದು ಅವರು ಹೇಳಿದರು.

ಎಲ್ಲಾ ಒಂಬತ್ತು ಮಂದಿ ಪ್ರಸ್ತುತ ಬಂಧನ ಕೇಂದ್ರಗಳಲ್ಲಿದ್ದು, ಅವರನ್ನು ಗಡೀಪಾರು ಮಾಡಲಾಗುವುದು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಕ್ರಮ ವಲಸಿಗರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಕಳೆದ ವರ್ಷ ನವೆಂಬರ್ 19ರಂದು ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಲ್ಲಿಯವರೆಗೆ, 20 ಬಾಂಗ್ಲಾದೇಶಿ ಪ್ರಜೆಗಳನ್ನು ಪೂರ್ವ ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT